ವಿಜಯಪುರ: ಗಡಿಯಲ್ಲಿ ದೇಶದ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಭಾರತೀಯ ಸೈನಿಕರಿಗಾಗಿ ಲೀಡರ್ಸ್ ಎಕ್ಸಲರೇಟಿಂಗ್ ಡೆವಲಪ್ಮೆಂಟ್ ಪ್ರೋಗ್ರಾಂನ ಅಡಿಯಲ್ಲಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗ್ರೀಟಿಂಗ್ ಕಾರ್ಡ್ಗಳು, ರಕ್ಷೆಗಳನ್ನು ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಧಾನ್ಯಗಳು, ಹಣ್ಣಿನ ಬೀಜಗಳು ಸೇರಿದಂತೆ ಮತ್ತಿತರ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿಕೊಂಡು ರಕ್ಷೆಯನ್ನು ತಯಾರಿಸಲಾಗುತ್ತಿದೆ. ಜಲೈ 26 ರ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ದೇಶವನ್ನು ಕಾಪಾಡುತ್ತಿರುವ ಯೋಧರಿಗೆ ರಕ್ಷಾ ಬಂಧನದ ಶುಭಕಾಮನೆಗಳನ್ನು ತಿಳಿಸಲು ರಕ್ಷೆಗಳ ತಯಾರಿಯಲ್ಲಿ, ಗ್ರೀಟಿಂಗ್ಸ್ಗಳ ತಯಾರಿಯಲ್ಲಿ ವಿದ್ಯಾರ್ಥಿಗಳು ನಿರತರಾಗಿದ್ದಾರೆ.
ಈ ಅಭಿಯಾನದಡಿಯಲ್ಲಿ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಧಾನ್ಯಗಳನ್ನು, ಹಣ್ಣಿನ ಬೀಜಗಳನ್ನು ಬಳಸಿಕೊಂಡು 500ಕ್ಕೂ ಅಧಿಕ ಪರಿಸರ ಸ್ನೇಹಿ ವಸ್ತುಗಳನ್ನು ಸಿದ್ಧಪಡಿಸಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮನೆಯಲ್ಲೇ ಕೂರುವಂತಾಗಿದೆ. ಹೀಗಾಗಿ ಲೀಡ್ ಸಂಸ್ಥೆ ಕ್ರಿಯಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಹೀಗೆ ತಯಾರಿಸಲಾದ ರಕ್ಷೆಗಳು ಮತ್ತು ಗ್ರೀಟಿಂಗ್ಸ್ ಗಳನ್ನು ಯೋಧರಿಗೆ ಕಳುಹಿಸುವುದಾಗಿಯೂ ಆಯೋಜಕರು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಎಲ್ಇಡಿ ಎಂಜಿನಿಯರಿಂಗ್ ಮಹಾವಿದ್ಯಾಲಯದ ಉಪನ್ಯಾಸಕರು, ಶಾಂತವೀರ ಕಲಾ ವಾಣಿಜ್ಯ ಕಾಲೇಜು, ಸಿದ್ದೇಶ್ವರ ಚಿತ್ರಕಲಾ ಮಹಾವಿದ್ಯಾಲಯ, ದರಬಾರ ಬಿಬಿಎ ಹಾಗೂ ಬಿಸಿಎ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.