ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ರಣಬೀರ್ಗಢದಲ್ಲಿ ನಡೆದ ಎನ್ಕೌಂಟರ್ನಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿವೆ.
ರಣಬೀರ್ಗಢ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಉಗ್ರರನ್ನು ಹತ್ಯೆ ಮಾಡಿದವು ಎಂದು ವರದಿಗಳು ತಿಳಿಸಿವೆ.
ಮೃತ ಉಗ್ರನನ್ನು ಎಲ್ಇಟಿಯ ಉನ್ನತ ಕಮಾಂಡರ್ಗಳಲ್ಲಿ ಒಬ್ಬನಾದ ಇಶ್ಫಾಕ್ ರಶೀದ್ ಖಾನ್ ಮತ್ತು ಎಲ್ಇಟಿ ಭಯೋತ್ಪಾದಕ ಐಜಾಜ್ ಅಹ್ಮದ್ ಎಂದು ಗುರುತಿಸಲಾಗಿದೆ.
ಕಾರ್ಯಾಚರಣೆ ನಡೆದ ಪ್ರದೇಶವು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿಯಲ್ಲಿರುವ ಶ್ರೀನಗರ ನಗರದ ಹೊರವಲಯದಲ್ಲಿರುವ ಪಂಜಿನಾರಾದಲ್ಲಿ ಬರುತ್ತದೆ. ಮೃತ ಉಗ್ರರನ್ನು ಜೈಶೇ ಇ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಶಂಕಿಸಲಾಗಿದೆ.
ಭದ್ರತಾ ಪಡೆಗಳು ಶನಿವಾರ ಮುಂಜಾನೆ ಉಗ್ರರು ಅವಿತುಕೊಂಡಿದ್ದ ಸ್ಥಳವನ್ನು ಸುತ್ತುವರಿದಂತೆ, ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದ್ದಾರೆ, ಹೀಗಾಗಿ ಅನಿವಾರ್ಯವಾಗಿ ಭದ್ರತಾ ಪಡೆಗಳು ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಬೇಕಾಗಿ ಬಂತು ಎಂದು ಮೂಲಗಳು ತಿಳಿಸಿವೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದರು ಮತ್ತು ಒರ್ವ ಸೈನಿಕ ಗಾಯಗೊಂಡಿದ್ದಾರೆ.
ವರದಿಯ ಪ್ರಕಾರ, ಈ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆಯೊಂದಿಗೆ ಭದ್ರತಾ ಪಡೆಗಳು ಈ ವರ್ಷ ಜಮ್ಮು-ಕಾಶ್ಮೀರದಲ್ಲಿ 140 ಕ್ಕೂ ಹೆಚ್ಚು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿವೆ.
#BREAKING: Two Lashkar e Tayyiba terrorists killed in an early morning encounter with security forces in outskirts of Srinagar at Ranbirgarh (Panzinara). Identification underway. Ops have concluded. pic.twitter.com/eg7MeXuFKd
— Aditya Raj Kaul (@AdityaRajKaul) July 25, 2020
Jammu and Kashmir: Ishfaq Rashid Khan, one of the top LeT commanders and LeT terrorist Aijaz Ahmad were neutralised by security forces today during Ranbirgarh encounter pic.twitter.com/hDlrptbNy4
— ANI (@ANI) July 25, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.