ನವದೆಹಲಿ: ರಾತ್ರಿ ಮೂರು ಗಂಟೆ ಸುಮಾರಿಗೆ ಗರ್ಭಿಣಿ ಮಹಿಳೆಯೋರ್ವರನ್ನು ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಿಂದ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ತಾನೇ ಆಟೋ ರಿಕ್ಷಾವನ್ನು ಚಲಾಯಿಸುವ ಮೂಲಕ ತಲುಪಿಸಿದ ಆಶಾ ಕಾರ್ಯಕರ್ತೆ, 53 ವರ್ಷದ ರಾಜೀವಿ ಅವರನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಾಯ್ಡು, ಗರ್ಭಿಣಿ ಮಹಿಳೆಯನ್ನು ರಾಜೀವಿ ಅವರು ಯಾವುದೇ ಶುಲ್ಕ ಪಡೆಯದೆ ತನ್ನದೇ ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿರುವುದು ಇತರರಿಗೂ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವಿ ಅವರು ತಮ್ಮ ಬಿಡುವಿನ ಸಮಯದಲ್ಲಿ ಆಟೋ ರಿಕ್ಷಾ ಓಡಿಸುವ ಕೆಲಸವನ್ನು ಮಾಡುತ್ತಿದ್ದು, ಕೆಲವೇ ದಿನಗಳ ಹಿಂದೆ ಮಧ್ಯರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ತಮ್ಮ ರಿಕ್ಷಾದ ಮೂಲಕ ಉಚಿತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಗರ್ಭಿಣಿ ಮಹಿಳೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ರಾಜೀವಿ ಅವರ ಈ ಸಮಾಜ ಸೇವೆಯನ್ನು ಮೆಚ್ಚಿ ಹಲವಾರು ಜನ ಅವರನ್ನು ಪ್ರಶಂಸಿಸಿದ್ದರು. ಇದೀಗ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ರಾಜೀವಿ ಅವರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
कर्नाटक के उडुपी जिले की आशा स्वास्थ्य कर्मी श्रीमती राजवी की मानवीय संवेदना अनुकरणीय और अभिनंदनीय है। उन्होंने रात के 3 बजे एक गर्भवती महिला को अपने ऑटो रिक्शा में बैठा कर अस्पताल पहुंचाया।https://t.co/ZMeocOLfUK
— Vice President of India (@VPSecretariat) July 25, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.