ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿ, ರಾಷ್ಟ್ರಪತಿ ಭವನವನ್ನು ಪ್ರವೇಶಿಸಿ ಇಂದಿಗೆ ಮೂರು ವರ್ಷ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ರಾಷ್ಟ್ರಪತಿ ಭವನ, ರಾಮನಾಥ ಕೋವಿಂದ್ ಅವರು ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದಿದೆ.
ಅಲ್ಲದೇ, ರಾಮನಾಥ ಕೋವಿಂದ್ ಅವರು ತಮ್ಮ ಅಧಿಕಾರವಧಿಯ ಮೂರು ವರ್ಷಗಳಲ್ಲಿ ಯೋಧರು ಮತ್ತು ವಿಜ್ಞಾನಿಗಳು ಸೇರಿದಂತೆ ಸುಮಾರು ಏಳು ಸಾವಿರ ಜನರನ್ನು ಭೇಟಿಯಾಗಿದ್ದಾರೆ ಎಂದಿದೆ.
“ಭಾರತದ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ ಅವರು ಕಚೇರಿಯಲ್ಲಿ ಮೂರು ವರ್ಷಗಳನ್ನು ಪೂರೈಸಿದ್ದಾರೆ” ಎಂದು ಟ್ವೀಟ್ ಮಾಡಿದೆ.
ರಾಷ್ಟ್ರಪತಿಭವನದ ಪ್ರಕಟಣೆಯ ಪ್ರಕಾರ, ರಾಮನಾಥ ಕೋವಿಂದ್ ಮತ್ತು ದೇಶದ ಪ್ರಥಮ ಮಹಿಳೆ ಹಾಗೂ ಅವರ ಕುಟುಂಬ ಜೀವವನ್ನು ಪಣಕ್ಕಿಟ್ಟು ದೇಶದ ರಕ್ಷಣೆಯಲ್ಲಿ ತೊಡಗಿರುವ, ದೇಶದ ಆರೋಗ್ಯವನ್ನು ಕಾಪಾಡುತ್ತಿರುವ ಕೊರೋನಾ ಯೋಧರಿಗೆ ಕೃತಜ್ಞತೆಗಳನ್ನು ಸಲ್ಲಿಸಿ ಹಲವು ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ.
ರಾಷ್ಟ್ರಪತಿಗಳು ತಮ್ಮ ಒಂದು ತಿಂಗಳ ವೇತನವನ್ನು ಪಿಎಂ ಕೇರ್ಸ್ ನಿಧಿಗೆ ಕೊಡುಗೆಯಾಗಿ ನೀಡಿದ್ದಾರೆ. ಮಾತ್ರವಲ್ಲದೆ, ಒಂದು ವರ್ಷಗಳವರೆಗೆ ತಮ್ಮ ವೇತನದ 30 ಶೇಕಡಾವನ್ನು ನಿಧಿಗೆ ನೀಡುವ ಘೋಷಣೆ ಮಾಡಿದ್ದಾರೆ.
ಮಾತ್ರವಲ್ಲದೆ ರಾಷ್ಟ್ರಪತಿ ಭವನ ವೆಚ್ಚಗಳನ್ನು ಕಡಿತಗೊಳಿಸುವ ದೃಢನಿರ್ಧಾರವನ್ನು ಅವರ ನೇತೃತ್ವದಲ್ಲಿ ತೆಗೆದುಕೊಂಡಿದೆ.
ಕರೋನವೈರಸ್ ವಿರುದ್ಧದ ಕ್ರಮಗಳಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಮನಾಥ್ ಕೋವಿಂದ್ ಅವರು ಜುಲೈ 25, 2017 ರಿಂದ 14 ನೇ ಮತ್ತು ಪ್ರಸ್ತುತ ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅವರು 2015 ರಿಂದ 2017 ರವರೆಗೆ ಬಿಹಾರದ 26 ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು ಮತ್ತು 1994 ರಿಂದ 2006 ರವರೆಗೆ ರಾಜ್ಯಸಭೆಯ ಸಂಸತ್ ಸದಸ್ಯರಾಗಿದ್ದರು.
The President of India, Shri Ram Nath Kovind, completes three years in office today. Here are some highlights of the third year of presidency. #PresidentKovindAtThree pic.twitter.com/EaqgrW8RLw
— President of India (@rashtrapatibhvn) July 25, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.