ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರುವ ಕಾರ್ಯಕ್ರಮವನ್ನು ಸಾಧುಗಳು, ಸಂತರು ಮತ್ತು ಜನಸಾಮಾನ್ಯರು ತಾವಿದ್ದ ಸ್ಥಳಗಳಲ್ಲಿ, ಆಶ್ರಮಗಳಲ್ಲಿ ಮತ್ತು ಮನೆಗಳಲ್ಲಿ ಪೂಜೆ ನೆರವೇರಿಸುವ ಮೂಲಕ ಮತ್ತು ದೀಪಗಳನ್ನು ಬೆಳಗಿಸುವ ಮೂಲಕ ಆಚರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿಕೊಂಡಿದೆ.
ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಯೋಧ್ಯಕ್ಕೆ ಭೇಟಿ ನೀಡಿ, ಭೂಮಿ ಪೂಜೆಯ ಕಾರ್ಯಕ್ರಮಗಳ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಕರೋನವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸೇರುವಂತೆ ಇಲ್ಲ. ಹೀಗಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ. ಜನರು ತಾವಿದ್ದ ಸ್ಥಳದಲ್ಲಿಯೇ ಶಿಲಾನ್ಯಾಸ ಕಾರ್ಯಕ್ರಮವನ್ನು ವೀಕ್ಷಣೆ ಮಾಡಬಹುದಾಗಿದೆ.
ಈ ಸಮಾರಂಭಕ್ಕೆ ದೇಶದ ಪವಿತ್ರ ಕ್ಷೇತ್ರಗಳ, ಪವಿತ್ರ ನದಿಗಳ ನೀರನ್ನು ತರಲಾಗುತ್ತದೆ. ಈ ಮೂಲಕ ರಾಮ ಜನ್ಮಭೂಮಿಯ ಈ ದೇವಾಲಯವು ಸಾಮಾಜಿಕ ಸಾಮರಸ್ಯ ರಾಷ್ಟ್ರೀಯ ಏಕತೆಯ ಸಂಕೇತವಾಗಲಿದೆ ಮತ್ತು ಹಿಂದುತ್ವದ ಭಾವನೆಯ ಏಕೀಕರಣ ಮತ್ತು ಜಾಗೃತಿಯ ಕೇಂದ್ರವಾಗಲಿದೆ ಎಂದು ಬಿಎಚ್ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಂಡೇ ಹೇಳಿದ್ದಾರೆ.
ಹಿಂದೂ ಸಮಾಜದ ನೂರಾರು ವರ್ಷಗಳ ಪರಿಶ್ರಮದ ಸಂಕೇತವಾಗಿ, ಶ್ರೀ ರಾಮನ ಭಕ್ತರ ಆಕಾಂಕ್ಷೆಗಳು ಈಡೇರುವ ಈ ಶುಭ ಸಂದರ್ಭದಲ್ಲಿ, ಆಗಸ್ಟ್ 5 ರಂದು ಬೆಳಿಗ್ಗೆ 10.30ಕ್ಕೆ ಜನರು ಆಯಾ ಸ್ಥಳಗಳು, ಆಶ್ರಮಗಳು, ಮನೆಗಳು ಇತ್ಯಾದಿಗಳಲ್ಲಿ ಪೂಜೆ ಸಲ್ಲಿಸುವ. ಕೀರ್ತನೆ, ಆರತಿ ಮತ್ತು ಪ್ರಸಾದ ವಿತರಣೆಯನ್ನು ಏರ್ಪಡಿಸುವ ಮೂಲಕ ಆಚರಣೆ ಮಾಡಬೇಕು ಎಂದು ಪರಂಡೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.