ನವದೆಹಲಿ: ಶ್ರಮಿಕ ರೈಲುಗಳನ್ನು ಓಡಿಸುವ ಮೂಲಕ ಭಾರತೀಯ ರೈಲ್ವೆಯು ಆದಾಯವನ್ನು ಮಾಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರು ವಾಗ್ದಾಳಿ ನಡೆಸಿದ್ದಾರೆ. ದೇಶವನ್ನು ಲೂಟಿ ಮಾಡಿದವರು ಮಾತ್ರ, ಸಬ್ಸಿಡಿಯನ್ನು ಆದಾಯ ಎಂದು ಕರೆಯಬಲ್ಲರು ಎಂದಿದ್ದಾರೆ.
“ಕೇವಲ ದೇಶವನ್ನು ಲೂಟಿ ಮಾಡಿದವರು ಮಾತ್ರ ಸಬ್ಸಿಡಿಯನ್ನು ಆದಾಯ ಎಂದು ವಿಶ್ಲೇಷಿಸಬಲ್ಲರು. ರೈಲ್ವೆಯು ಶ್ರಮಿಕ ರೈಲುಗಳನ್ನು ಓಡಿಸಲು ರಾಜ್ಯಗಳಿಂದ ಪಡೆದ ಹಣಕ್ಕಿಂತ ಹೆಚ್ಚಿನ ಹಣವನ್ನು ವ್ಯಯಿಸಿದೆ. ಟಿಕೆಟ್ಗಳಿಗೆ ಪಾವತಿ ಮಾಡುತ್ತೇನೆ ಎಂದು ಹೇಳಿದ ಸೋನಿಯಾ ಗಾಂಧಿಯವರ ಭರವಸೆ ಈಗ ಎಲ್ಲಿಗೆ ಹೋಯಿತು ಎಂದು ಜನರು ಪ್ರಶ್ನಿಸುತ್ತಿದ್ದಾರೆ” ಎಂದು ಗೋಯಲ್ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ವಲಸಿಗರನ್ನು ಅವರ ತವರು ರಾಜ್ಯಗಳಿಗೆ ವಾಪಸ್ ಕಳುಹಿಸಲು ರೈಲ್ವೆ ಟಿಕೆಟ್ಗೆ ಹಣ ಪಾವತಿ ಮಾಡುವುದಾಗಿ ಸೋನಿಯಾ ಗಾಂಧಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗೋಯಲ್, ನೀಡಿದ ಭರವಸೆಯನ್ನು ಯಾಕೆ ಈಡೇರಿಸಲಿಲ್ಲ ಎಂದು ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ.
ವರದಿಗಳ ಪ್ರಕಾರ, ಭಾರತೀಯ ರೈಲ್ವೆ ಶ್ರಮಿಕ ರೈಲುಗಳನ್ನು ಓಡಿಸಲು 2,142 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಆದರೆ ಇದಕ್ಕಾಗಿ ರಾಜ್ಯಗಳಿಂದ ಪಡೆದುಕೊಂಡ ಹಣ ಕೇವಲ 429 ಕೋಟಿ ರೂಪಾಯಿ ಆಗಿದೆ.
ಅಜಯ್ ಬೋಸ್ ಎಂಬವರು ಸಲ್ಲಿಸಿದ ಆರ್ಟಿಐ ಅರ್ಜಿಯಿಂದ ಈ ಮಾಹಿತಿ ಬಹಿರಂಗವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.