ನವದೆಹಲಿ: ಸಂಸತ್ತಿನಲ್ಲಿ ದೇಶದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ನವದೆಹಲಿಯಲ್ಲಿ ಸೋಮವಾರದಿಂದ ಮಾಜಿ ಪ್ರಧಾನಿ ದೇವೇಗೌಡ ಅವರು ನಿರಶನ ಆರಂಭಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಅವರ ನಿರಶನ ಆರಂಭವಾಗಿದ್ದು, ಜೆಡಿಎಸ್ ಶಾಸಕರು, ಸಂಸದರು ಸೇರಿದಂತೆ ಸಮಾಜವಾದಿ ಪಕ್ಷದವರೂ ಅವರಿಗೆ ಸಾಥ್ ನೀಡಿದ್ದಾರೆ.
ಕರ್ನಾಟಕದಲ್ಲಿ ನಿತ್ಯ 16 ರೈತರು ಸಾವನ್ನಪ್ಪುತ್ತಿದ್ದಾರೆ ಎಂದಿರುವ ಅವರು, ಸಂಸತ್ತಿನಲ್ಲಿ ರೈತರ ಬಗ್ಗೆ ಚರ್ಚೆ ನಡೆಯುವವರೆಗೂ ನಿರಶನವನ್ನು ಮುಂದುವರೆಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ರೈತರು ಪ್ರೇಮ ವೈಫಲ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿರುವ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ವಿರುದ್ಧವೂ ಅವರು ಹರಿಹಾಯ್ದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.