ನವದೆಹಲಿ: ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಜವಹಾರ್ಲಾಲ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಸಾಜಿದ್ ಬಿನ್ ಸೈಯದ್ ವಿರುದ್ದ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲು ಮಾಡಿದ್ದಾರೆ. ಈತ ಟ್ವಿಟರ್ ಮೂಲಕ ಭಾರತೀಯ ಸೇನೆ ಹಾಗೂ ಆರ್ಎಸ್ಎಸ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿ ದ್ವೇಷ ಬಿತ್ತುವ ಕುತಂತ್ರ ನಡೆಸಿದ್ದ ಎಂದು ವರದಿಗಳು ತಿಳಿಸಿವೆ.
ಸಾಜಿದ್ ಕ್ಯಾಂಪಸ್ ಫ್ರಾಂಟ್ ಆಫ್ ಇಂಡಿಯಾದ ಅಧ್ಯಕ್ಷನೂ ಆಗಿದ್ದಾನೆ. ಟ್ವಿಟ್ ಮಾಡಿದ್ದ ಈತ, ಭಾರತೀಯ ಸೇನೆಯು ಕಾಶ್ಮೀರದಲ್ಲಿ ಜನಾಂಗೀಯ ಹತ್ಯೆ ನಡೆಸುತ್ತಿದೆ ಮತ್ತು ಇದನ್ನು ಆರ್ಎಸ್ಎಸ್ ಪ್ರಾಯೋಜಿಸುತ್ತಿದೆ ಎಂದು ಹೇಳಿದ್ದ.
ಮೂಲಭೂತ ಇಸ್ಲಾಮಿಸ್ಟ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮಾರ್ಗದರ್ಶನದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾವನ್ನು ಪ್ರಾರಂಭಿಸಲಾಯಿತು ಎಂಬುದು ಇಲ್ಲಿ ಗಮನಾರ್ಹ ವಿಷಯ.
ಜೆಎನ್ಯು ಸಂಶೋಧನಾ ವಿದ್ಯಾರ್ಥಿ ಸಾಜಿದ್ ಬಿನ್ ಸಯೀದ್ ಅವರನ್ನು ರಾಷ್ಟ್ರೀಯ ವಿರೋಧಿ, ಭಾರತೀಯ ಸೇನಾ ವಿರೋಧಿ ಹೇಳಿಕೆಗಾಗಿ ಬುಕ್ ಮಾಡಲಾಗಿದೆ.
ಬಿಜೆಪಿ ಕಾರ್ಯಕರ್ತ ಮತ್ತು ನೈರುತ್ಯ ದೆಹಲಿಯ ಕಪಶೇರಾ ಪ್ರದೇಶದ ನಿವಾಸಿಯಾದ ತಾಜಿಂದರ್ ಯಾದವ್ ಅವರ ದೂರಿನ ಮೇರೆಗೆ ಜೆಎನ್ಯು ಈತನ ವಿರುದ್ಧ , ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಶಾಂತಿ ಉಲ್ಲಂಘನೆಯನ್ನು ಉಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
“ನಾವು ಲಿಖಿತ ದೂರನ್ನು ಸ್ವೀಕರಿಸಿದ್ದೇವೆ ಮತ್ತು ದೂರಿನ ಆಧಾರದ ಮೇಲೆ ಐಪಿಸಿಯ 153 ಎ ಮತ್ತು 504 ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅದಕ್ಕೆ ಅನುಸಾರವಾಗಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.