ನವದೆಹಲಿ: ಕೊರೋನಾ ಸೋಂಕಿನಿಂದ ಈ ವರೆಗೆ ಸುಮಾರು 9,17,568 ಮಂದಿ ಚೇತರಿಸಿಕೊಂಡಿದ್ದು, ಆ ಮೂಲಕ ಚೇತರಿಕೆಯ ಪ್ರಮಾಣ 63.92% ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸಾವಿನ ಪ್ರಮಾಣ 2.28% ರಷ್ಟು ಇಳಿಕೆಯಾಗಿದೆ ಎಂದೂ ಸಚಿವಾಲಯ ವರದಿಯಲ್ಲಿ ತಿಳಿಸಿದೆ.
ಭಾರತದಲ್ಲಿ ಈ ವರೆಗೆ 14,35,453 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇವರಲ್ಲಿ 9,17,568 ಮಂದಿ ಚೇತರಿಸಿಕೊಂಡಿದ್ದಾರೆ. 4,85,114 ಸಕ್ರಿಯ ಪ್ರಕರಣಗಳಿರುವುದಾಗಿಯೂ ವರದಿಯಲ್ಲಿ ತಿಳಿಸಿದೆ. ಈ ವರೆಗೆ ಸೋಂಕಿನಿಂದ 32,771 ಮಂದಿ ಮೃತಪಟ್ಟಿದ್ದಾರೆ ಎಂದೂ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಿಗೆ ಸಂಬಂಧಿಸಿದಂತೆ ದೇಶದಲ್ಲಿ ಒಟ್ಟು 31,991 ಕೊರೋನಾ ಪ್ರಕರಣಗಳು ದಾಖಲಾಗಿವೆ. 708 ಮಂದಿ ಮೃತಪಟ್ಟಿದ್ದಾರೆ ಎಂದೂ ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ.
ಚೇತರಿಕೆಯ ಪ್ರಮಾಣದಲ್ಲಿ 87.95% ದೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಕೇಂದ್ರಾಡಳಿತ ಪ್ರದೇಶಗಳಾದ ಲಡಾಕ್, ಹರಿಯಾಣ, ತೆಲಂಗಾಣ, ಅಸ್ಸಾಂ ರಾಜ್ಯಗಳ ಚೇತರಿಕೆಯ ಪ್ರಮಾಣ 74% ಕ್ಕಿಂತ ಹೆಚ್ಚಾಗಿದೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಮತ್ತು ಆಂಧ್ರಪ್ರದೇಶ ಗಳಲ್ಲಿ ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಕರ್ನಾಟಕ,ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶ ಗಳಿಂದ ಒಟ್ಟಾರೆ 68.83% ಪ್ರಕರಣಗಳು ದಾಖಲಾಗಿರುವುದಾಗಿಯೂ ಈ ವರದಿ ಮಾಹಿತಿ ನೀಡಿದೆ. ಜೊತೆಗೆ ಒಂದೇ ದಿನಕ್ಕೆ ಸಂಬಂಧಿಸಿದಂತೆ 5 ಲಕ್ಷ ಗಳಷ್ಟು ಕೊರೋನಾ ಮಾದರಿಗಳನ್ನು ಪರೀಕ್ಷೆ ಮಾಡುವ ಮೂಲಕ ಭಾರತ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂದೂ ಈ ವರದಿಯಲ್ಲಿನ ಅಂಕಿ ಅಂಶಗಳು ತಿಳಿಸಿವೆ.
ದೇಶದ ವಿವಿಧ ಪ್ರಯೋಗಾಲಯಗಳಲ್ಲಿ ಕೇವಲ 24 ಗಂಟೆಗಳಲ್ಲಿಯೇ 5,15,472 ಕೊರೋನಾ ವೈರಸ್ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ 1 ಕೋಟಿಯ 68 ಲಕ್ಷ ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.