ನವದೆಹಲಿ: 2019ರ ಆಗಸ್ಟ್ 1ರಂದು ಅತಿ ಮಹತ್ವಪೂರ್ಣ ತ್ರಿವಳಿ ತಲಾಕ್ ಕಾಯ್ದೆಯು ರಾಷ್ಟ್ರಪತಿಗಳ ಅಂಕಿತವನ್ನು ಪಡೆದುಕೊಂಡು ಕಾನೂನು ಆಗಿ ದೇಶದಲ್ಲಿ ಜಾರಿಗೆ ಬಂತು. ಈ ಹಿನ್ನೆಲೆಯಲ್ಲಿ ಈ ವರ್ಷದಿಂದ ಆಗಸ್ಟ್ 1 ಅನ್ನು ‘ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನ’ ಆಗಿ ಆಚರಿಸುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿದೆ.
ವರದಿಗಳ ಪ್ರಕಾರ, ಈ ದಿನವನ್ನು ಬಿಜೆಪಿಯು ಮಹತ್ವಪೂರ್ಣ ದಿನವಾಗಿ ಆಚರಿಸಲಿದೆ. ಕೇಂದ್ರ ಸಚಿವ ಸಂಪುಟದ ಸಚಿವರುಗಳಾದ ಸ್ಮೃತಿ ಇರಾನಿ, ಮುಕ್ತಾರ್ ಅಬ್ಬಾಸ್ ನಖ್ವಿ, ರವಿಶಂಕರ್ ಪ್ರಸಾದ್ ಅವರು ವರ್ಚುವಲ್ ಕಾನ್ಫರೆನ್ಸ್ ಮೂಲಕ ಮುಸ್ಲಿಂ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇತರ ನಾಯಕರಿಗೂ ವರ್ಚುವಲ್ ಸಮಾವೇಶಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ದೇಶದಾದ್ಯಂತ ಈ ದಿನ ಸಮಾರಂಭಗಳು ಏರ್ಪಡಲಿದೆ. ಕೋಮು ಸೌಹಾರ್ದತೆಯನ್ನು ಕಾಪಾಡಲು ಇದೊಂದು ಒಳ್ಳೆ ಅವಕಾಶವಾಗಿದೆ ಎಂದು ಬಿಜೆಪಿ ಅಭಿಪ್ರಾಯಿಸಿದೆ.
ಮುಸ್ಲಿಂ ಮಹಿಳೆಯರಿಗೆ ತಲುಪುವಂತಹ ಕಾರ್ಯಕ್ರಮಗಳನ್ನು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ಅವರು ರೂಪಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ನಮ್ಮ ಸರ್ಕಾರವನ್ನು ಹಲವರು ಮುಸ್ಲಿಂ ವಿರೋಧಿ ಎಂದು ಬಿಂಬಿಸಲು ಪ್ರಯತ್ನಿಸಿದರು. ಆದರೆ ಅತ್ಯಂತ ಕ್ರೂರವಾದ ತ್ರಿವಳಿ ತಲಾಕ್ ಮಸೂದೆಯನ್ನು ನಿರ್ಮೂಲನೆ ಮಾಡಿದ್ದು ನಮ್ಮ ಸರ್ಕಾರ. ತ್ರಿವಳಿ ತಲಾಕ್ ನಿರ್ಮೂಲನೆ ಸಮಾಜದಲ್ಲಿ ಮುಸ್ಲಿಂ ಮಹಿಳೆಯರ ಸ್ಥಾನಮಾನವನ್ನು ಹೆಚ್ಚಿಸಿತು, ಅವರಿಗೆ ಆರ್ಥಿಕ ಬಲಿಷ್ಠತೆಯನ್ನು ನೀಡಿತು. ಕಳೆದ ಒಂದು ವರ್ಷಗಳಲ್ಲಿ ಈ ಕಾಯ್ದೆಯಿಂದ ಸಕಾರತ್ಮಕ ಬೆಳವಣಿಗೆಗಳು ಕಾಣುತ್ತಿವೆ” ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಅಭಿಪ್ರಾಯಿಸಿದ್ದಾರೆ.
ತ್ರಿವಳಿ ತಲಾಕ್ ಮಸೂದೆ ಅಡಿ, ತಪ್ಪಿತಸ್ಥರಿಗೆ ಸೆರೆವಾಸ ಹಾಗೂ ಭಾರಿ ದಂಡವನ್ನು ವಿಧಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.