ನವದೆಹಲಿ: ಆಗಸ್ಟ್ 15ರಂದು ಉತ್ತರ ಪ್ರದೇಶದ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಪಾಕಿಸ್ಥಾನದ ಐಎಸ್ಐ ಪ್ರೇರಿತ ಉಗ್ರ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಭಾರತೀಯ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಗಳಾದ ಲಷ್ಕರ್ ಎ ತೋಯ್ಬಾ ಮತ್ತು ಜೈಷ್ ಇ ಮೊಹಮ್ಮದ್ ಸಂಘಟನೆಗಳಿಗೆ ಅಯೋಧ್ಯೆಯಲ್ಲಿ ದಾಳಿ ನಡೆಸಲು ಬೇಕಾದ ಪೂರ್ವ ತಯಾರಿ, ತರಬೇತಿಗಳನ್ನೂ ಐಎಸ್ಐ ನೀಡುತ್ತಿರುವುದಾಗಿಯೂ ಭಾರತೀಯ ಇಂಟಲಿಜೆನ್ಸ್ ಬ್ಯುರೋ ರಾ ಎಚ್ಚರಿಕೆ ನೀಡಿದೆ. ಜೊತೆಗೆ ಭಾರತದಲ್ಲಿ ಬೇರೆ ಬೇರೆ ಕಡೆಗಳಲ್ಲಿ ದಾಳಿ ನಡೆಸುವ ಎಲ್ಲಾ ಸಾಧ್ಯತೆಗಳಿರುವುದಾಗಿಯೂ ಗುಪ್ತಚರ ಇಲಾಖೆ ತಿಳಿಸಿದೆ.
ಐಎಸ್ಐ ಈಗಾಗಲೇ ಉಗ್ರ ಸಂಘಟನೆಗಳಿಗೆ ದಾಳಿ ನಡೆಸಲು ಪೂರಕ ತರಬೇತಿಗಳನ್ನು ನೀಡುತ್ತಿದ್ದು, ಉಗ್ರರ ಮೂರು ಅಥವಾ ಐದು ಗುಂಪುಗಳನ್ನು ಭಾರತದಲ್ಲಿ ದಾಳಿ ನಡೆಸಲು ಕಳುಹಿಸಿಕೊಡುವ ಹೊಂಚು ಹಾಕಿದೆ ತಿಳಿದು ಬಂದಿದ್ದು, ಹೀಗಾಗಿ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳುವಂತೆಯೂ ಸೂಚಿಸಿದೆ. ಗಣ್ಯರನ್ನು ಗುರಿಯಾಗಿಸಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು ಪಾಕಿಸ್ಥಾನ ಸಂಚು ಹೂಡುತ್ತಿರುವುದಾಗಿಯೂ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈ ಕಾರಣದಿಂದಾಗಿ ದೆಹಲಿ, ಜಮ್ಮು ಕಾಶ್ಮೀರ ಮತ್ತು ಅಯೋಧ್ಯೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆಯೂ ತಿಳಿಸಿದೆ. ಜೊತೆಗೆ ಭಯೋತ್ಪಾದಕ ಕೃತ್ಯಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆಯೂ ಗುಪ್ತಚರ ಇಲಾಖೆ ಸೂಚಿಸಿದೆ.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣದ ಅಡಿಗಲ್ಲು ಹಾಕುವ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲಿದ್ದು, ಈ ಹಿನ್ನೆಲೆಯಲ್ಲಿಯೂ ಬಿಗಿ ಭದ್ರತೆ ಕೈಗೊಳ್ಳುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕಳೆದ ಬಾರಿ ಆಗಸ್ಟ್ 5 ರಂದೇ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಅನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.