ನವದೆಹಲಿ: ರಾಮ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ಶಂಕುಸ್ಥಾಪನೆ ಆಗಸ್ಟ್ 5 ರಂದು ನಡೆಯಲಿದ್ದು, ಅದಕ್ಕೂ ಮುನ್ನವೇ ಆರೆಸ್ಸೆಸ್ನ ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ರಾಮ ಜನ್ಮಭೂಮಿ ಚಳುವಳಿಯ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಪುಸ್ತಕವೊಂದನ್ನು ಬಿಡುಗಡೆ ಮಾಡಲಿದ್ದಾರೆ. ಆಗಸ್ಟ್ 1 ರಂದು ಈ ಪುಸ್ತಕ ಬಿಡುಗಡೆಯಾಗಲಿದೆ.
ಈ ಪುಸ್ತಕವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂವಹನ ವಿಭಾಗವಾದ ಐವಿಎಸ್ಕೆಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ) ಅರುಣ್ ಆನಂದ್ ಅವರು ಬರೆದಿದ್ದಾರೆ. ವಿನಯ್ ನಲ್ವಾ ಅವರು ಈ ಪುಸ್ತಕದ ಸಹ ಲೇಖಕರಾಗಿದ್ದಾರೆ. ವಿನಯ್ ಅವರು ಸಮಾಜಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದಿದ್ದು, ಪ್ರಸ್ತುತ ದೆಹಲಿ ಮೂಲದ ಥಿಂಕ್ ಟ್ಯಾಂಕ್ ‘ವಿಚಾರ್ ವಿನಿಮಯ್ ಕೇಂದ್ರ’ ದಲ್ಲಿ ಹಿರಿಯ ಫೆಲೋ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಆನಂದ್ ಅವರು ಹೇಳುವಂತೆ ಈ ಪುಸ್ತಕ, ಭಗವಾನ್ ಶ್ರೀ ರಾಮಚಂದ್ರನ ಜನನದಿಂದ ಹಿಡಿದು, ರಾಮ ಮಂದಿರ ನಿರ್ಮಾಣದ ನಡುವಿನ ಎಲ್ಲಾ ವಿಚಾರಗಳ ಬಗ್ಗೆಯೂ ಮಾಹಿತಿ ನೀಡುತ್ತದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸುಧೀರ್ಘ 500 ವರ್ಷಗಳ ಹೋರಾಟದ ಮಾಹಿತಿ, ಅಗತ್ಯ ಭೂ ದಾಖಲೆಗಳ ಮಾಹಿತಿ, 1528 ರ ಬಾಬರನ ದಾಳಿ, ನೆಲಸಮಗೊಂಡ ದೇವಾಲಯ ಮೊದಲಾದ ಸಂಗತಿಗಳನ್ನು ಈ ಪುಸ್ತಕದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.