ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಲೈನ್ ಆಫ್ ಕಂಟ್ರೋಲ್ ಪ್ರದೇಶದಲ್ಲಿ ಭಾರತದೊಳಕ್ಕೆ ಅಕ್ರಮವಾಗಿ ಒಳನುಸುಳಲೆತ್ನಿಸಿದ ಇಬ್ಬರು ಪಾಕಿಸ್ಥಾನ ಮೂಲದ ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಸಂಹರಿಸಿದೆ ಎಂದು ಮೂಲಗಳು ವರದಿ ಮಾಡಿವೆ.
ನೌಶೇರಾದ ಎಲ್ಒಸಿ ಪ್ರದೇಶದಲ್ಲಿ ಅಕ್ರಮವಾಗಿ ದೇಶದೊಳಕ್ಕೆ ಪ್ರವೇಶಿಸಲು ಉಗ್ರಗಾಮಿಗಳು ಪ್ರಯತ್ನ ನಡೆಸುತ್ತಿರುವ ಸಂದರ್ಭದಲ್ಲಿ ಭಾರತದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸಣ್ಣ ಪ್ರಮಾಣದ ಸ್ಪೋಟ ಸಂಭವಿಸಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಉಗ್ರರನ್ನು ವಧೆ ಮಾಡಲಾಗಿದ್ದರೆ, ಮತ್ತೋರ್ವ ಉಗ್ರ ಗಾಯಗೊಂಡಿದ್ದಾನೆ ಎಂದೂ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಬಳಿಯಲ್ಲಿ ಹೆಚ್ಚಿನ ಉಗ್ರರಿರುವ ಮಾಹಿತಿ ಇದ್ದು, ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರೆಸಿರುವುದಾಗಿಯೂ ಭದ್ರತಾ ಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಯತ್ನಿಸುತ್ತಿರುವ ಪಾಕಿಸ್ಥಾನ ಉಗ್ರರನ್ನು ಒಳನುಸುಳಿಸುವ ಪ್ರಯತ್ನ ಮಾಡುತ್ತಿದೆ. ಆದರೆ ಭಾರತೀಯ ಭದ್ರತಾ ಪಡೆಗಳ ಹದ್ದಿನ ಕಣ್ಗಾವಲವನ್ನು ತಪ್ಪಿಸಿ ಒಳನುಸುಳಲು ಉಗ್ರರಿಗೆ ಸಾಧ್ಯವಾಗುತ್ತಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.