ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ರಕ್ಷಣಾ ಸಚಿವಾಲಯವು ‘ಆತ್ಮನಿರ್ಭರ ಭಾರತ-ಸ್ವತಂತ್ರ ಭಾರತ’ಎಂಬ ಹೆಸರಿನಲ್ಲಿ ಆನ್ಲೈನ್ ಕ್ವಿಜ್ ಒಂದನ್ನು ನಡೆಸಲು ಮುಂದಾಗಿದೆ.
29 ಜುಲೈ -10 ಆಗಸ್ಟ್ ವರೆಗೆ ಕ್ವಿಜ್ ಸ್ಪರ್ಧೆ ನಡೆಯಲಿದ್ದು, ದೇಶದ ಯುವ ಜನಾಂಗದಲ್ಲಿ ರಾಷ್ಟ್ರಪ್ರೇಮ ಮೂಡಿಸುವ ಸಲುವಾಗಿ ಇದನ್ನು ಆಯೋಜನೆ ಮಾಡಲಿದೆ. ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಈ ಕ್ವಿಜ್ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಮತ್ತು ಏಳು ಜನರಿಗೆ ಸಮಾಧಾನಕರ ಬಹುಮಾನವನ್ನು ನೀಡಲಾಗುತ್ತದೆ ಎಂದೂ ಆಯೋಜಕರು ಮಾಹಿತಿ ನೀಡಿದ್ದಾರೆ.
ಪ್ರಥಮ ಬಹುಮಾನ-25,000ರೂ., ದ್ವಿತೀಯ ಬಹುಮಾನ-15,000 ರೂ., ತೃತೀಯ ಬಹುಮಾನ 10,000 ರೂ. ಹಾಗೂ ಸಮಾಧಾನಕರ ಬಹುಮಾನ(7)-5000 ರೂ. ಗಳನ್ನು ಬಹುಮಾನ ನೀಡಲಾಗುತ್ತದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. 14 ವರ್ಷ ಮೇಲ್ಪಟ್ಟ ಭಾರತೀಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದೂ ಸಚಿವಾಲಯ ತಿಳಿಸಿದೆ.
https://quiz.mygov.in/quiz/aatmanirbhar-bharat-swatantra-bharat-quiz/ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಪ್ರವೇಶಿಸಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.