ಬೆಂಗಳೂರು: ನಿನ್ನೆಯಷ್ಟೇ ಫ್ರಾನ್ಸ್ನಿಂದ ಭಾರತೀಯ ವಾಯುಸೇನೆಗೆ ರಫೇಲ್ ಯುದ್ಧವಿಮಾನಗಳು ಬಂದಿಳಿದಿವೆ. ಅಂಬಾಲ ವಾಯುನೆಲೆಗೆ ಬಂದಿರುವ ಈ ಯುದ್ಧ ವಿಮಾನವೊಂದರ ಪೈಲಟ್ ಆಗಿ ರಾಜ್ಯದ ವಿಜಯಪುರದ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿ ನೇತೃತ್ವ ವಹಿಸಿದ್ದರು.
ತಮ್ಮ ಶಾಲೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ವಿಂಗ್ ಕಮಾಂಡರ್ ಅರುಣ್ ಕುಮಾರ್ ಅವರು ರಫೇಲ್ ಮೂಲಕ 7000 ಕಿ.ಮೀ. ದೂರವನ್ನು ಯಾವುದೇ ತೊಡಕುಗಳಿಲ್ಲದೆ ಯಶಸ್ವಿಯಾಗಿ ಕ್ರಮಿಸಿರುವುದು ಈ ಶಾಲೆಯ ಸಿಬ್ಬಂದಿಗಳಿಗೆ ಸಂತಸವನ್ನು ತಂದುಕೊಟ್ಟಿದ್ದು, ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
1995 ರಿಂದ 2001 ರವರೆಗೆ ಈ ಶಾಲೆಯಲ್ಲಿ ತರಬೇತಿ ಪಡೆದಿದ್ದ ಅರುಣ್ ಮೂಲತಃ ಬಿಹಾರ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಇವರು 6ನೇ ತರಗತಿಯಿಂದ 12ನೇ ತರಗತಿಯವರೆಗೆ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದವರಾಗಿದ್ದಾರೆ. ಪಿಯುಸಿ ಬಳಿಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಯಲ್ಲಿ ಅಧ್ಯಯನ ನಡೆಸಿದ್ದಾರೆ. ಅಲ್ಲಿಂದ ಪೈಲೆಟ್ ತರಬೇತಿಯನ್ನು ಪಡೆದಿದ್ದು, ಇದೀಗ ದೇಶದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿರುವ ರಫೇಲ್ ಅನ್ನು ಫ್ರಾನ್ಸ್ ನಿಂದ ಭಾರತಕ್ಕೆ ತಂದು ಶಾಲೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಶಾಲೆಯ ಸಿಬ್ಬಂದಿಗಳು ಸಂತಸ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.