ನವದೆಹಲಿ: ಒಂದು ನಿಮಿಷದೊಳಗೆ ಫಲಿತಾಂಶಗಳನ್ನು ನೀಡುವ ಸಾಮರ್ಥ್ಯವನ್ನು ಹೊಂದಿರುವ ಕೋವಿಡ್ -19 ಕ್ಷಿಪ್ರ ಪರೀಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತದ ಸಹವರ್ತಿಗಳೊಂದಿಗೆ ಕೆಲಸ ಮಾಡುತ್ತಿರುವ ಉನ್ನತ ಇಸ್ರೇಲಿ ರಕ್ಷಣಾ ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರ ತಂಡವು ಸೋಮವಾರ ನವದೆಹಲಿಗೆ ಆಗಮಿಸಿದ್ದು, ಪ್ರಸ್ತುತ ಪ್ರಯೋಗಗಳನ್ನು ಆರಂಭಿಸಿದೆ.
ವರದಿಗಳ ಪ್ರಕಾರ, ಇಸ್ರೇಲಿ ರಾಯಭಾರಿ ರಾನ್ ಮಾಲ್ಕಾ ನೇತೃತ್ವದ ತಂಡವು ಟೆಲ್ ಅವೀವ್ನಿಂದ ವಿಶೇಷ ವಿಮಾನದಲ್ಲಿ ರಾಷ್ಟ್ರ ರಾಜಧಾನಿಯನ್ನು ತಲುಪಿದೆ, ಇದು ಇಸ್ರೇಲ್ನ ವಿದೇಶಾಂಗ ಸಚಿವಾಲಯ ಮತ್ತು ಖಾಸಗಿ ಕಂಪನಿಗಳು ನೀಡಿದ ಅತ್ಯಾಧುನಿಕ ಉಪಕರಣಗಳನ್ನು ಸಹ ಹೊತ್ತು ತಂದಿದೆ. ಉಪಕರಣಗಳಲ್ಲಿ ಇಸ್ರೇಲ್ ರಫ್ತು ಮಾಡುವುದನ್ನು ನಿರ್ಬಂಧಿಸಿರುವ ಡಜನ್ ಗಟ್ಟಲೆ ವೆಂಟಿಲೇಟರ್ಗಳು ಕೂಡ ಇದೆ ಎಂಬುದು ವಿಶೇಷ. ವಿಶೇಷ ಅನುಮೋದನೆ ಮೂಲಕ ಭಾರತಕ್ಕೆ ಇಸ್ರೇಲ್ ಇದನ್ನು ಒದಗಿಸುತ್ತಿದೆ ಎಂದು ಇಸ್ರೇಲಿ ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಿಪ್ರ ಪರೀಕ್ಷೆಗಳನ್ನು ಅಭಿವೃದ್ಧಿಪಡಿಸಲು ಇಸ್ರೇಲಿ ತಂಡವು ಪ್ರಧಾನ ಮಂತ್ರಿಯವರ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ.ವಿಜಯರಾಘವನ್ ನೇತೃತ್ವದ ಭಾರತೀಯ ವಿಜ್ಞಾನಿಗಳು ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ತಜ್ಞರೊಂದಿಗೆ ಕೆಲಸ ಮಾಡುತ್ತಿದ್ದು, 30 ಸೆಕೆಂಡುಗಳಲ್ಲಿ ಪರೀಕ್ಷೆ ಫಲಿತಾಂಶಗಳನ್ನು ನೀಡುವ ನಿರೀಕ್ಷೆಯಿದೆ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ.
ಕೋವಿಡ್ -19 ಅನ್ನು ಶೀಘ್ರವಾಗಿ ಪತ್ತೆಹಚ್ಚಲು ಸುಧಾರಿತ ತಂತ್ರಜ್ಞಾನಗಳ ಪರಿಣಾಮಕಾರಿತ್ವವನ್ನು ನಿರ್ಧರಿಸಲು ನಿಯೋಗವು ಪರೀಕ್ಷೆಗಳ ಸರಣಿಯನ್ನು ಪೂರ್ಣಗೊಳಿಸಲಿದೆ ಮತ್ತು ಭಾರತದಲ್ಲಿ ಅಂತಿಮ ಹಂತದ ಸಂಶೋಧನೆಗಳನ್ನು ನಡೆಸಲಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿತ್ತು.
“ಇಸ್ರೇಲ್ ಮತ್ತು ಭಾರತದ ನಡುವಿನ ಅನನ್ಯ ಸಹಕಾರವು ಕೇವಲ ಹತ್ತು ದಿನಗಳಲ್ಲಿ ಹತ್ತಾರು ಮಾದರಿಗಳನ್ನು ಸಂಗ್ರಹಿಸಲು ಮತ್ತು ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ಕಂಪ್ಯೂಟರ್ ವ್ಯವಸ್ಥೆಗಳನ್ನು ಬಳಸಿಕೊಂಡು ಅವುಗಳನ್ನು ವಿಶ್ಲೇಷಿಸಲು ನಿಯೋಗಕ್ಕೆ ಸಾಧ್ಯ ಮಾಡಿಕೊಟ್ಟಿದೆ” ಎಂದು ಹೇಳಿಕೆ ತಿಳಿಸಿದೆ.
“ಈ ಬೃಹತ್ ಮಾದರಿಯು ಪ್ರಕ್ರಿಯೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಪರಿಣಾಮಕಾರಿ ತಂತ್ರಜ್ಞಾನದ ಅನುಮೋದನೆಯನ್ನು ನೀಡುತ್ತದೆ. ಈ ಜಂಟಿ ಚಟುವಟಿಕೆಯ ತಯಾರಿಯಲ್ಲಿ ಅಗತ್ಯವಿರುವ ಎಲ್ಲಾ ಇಸ್ರೇಲಿ ಮತ್ತು ಭಾರತೀಯ ಅನುಮೋದನೆಗಳನ್ನು ಪಡೆದುಕೊಳ್ಳಲಾಗಿದೆ ಎಂಬುದು ಗಮನಾರ್ಹ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.