ನವದೆಹಲಿ: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಅ.15ರಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಗಡಿ ಭಾಗಗಳಲ್ಲಿ ಪೊಲೀಸ್ ಮತ್ತು ಸಶಸ್ತ್ರ ಸೀಮಾಬಲ ತಂಡ ಭದ್ರತಾ ಕ್ರಮಗಳನ್ನು ಕೈಗೊಂಡಿವೆ.
ಕಾರ್ಯಕ್ರಮದ ಸಂದರ್ಭದಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಬಗ್ಗೆ ದೇಶದ ಗುಪ್ತಚರ ಇಲಾಖೆಗಳು ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಭಾರತ ಮತ್ತು ನೇಪಾಳದ ಗಡಿ ಭಾಗಗಳಲ್ಲಿರುವ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಆ ಮೂಲಕ ಯಾವುದೇ ಅಪಾಯ ಸಂಭವಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ಆ ಭಾಗದಲ್ಲಿ ಓಡಾಡುವ ಅಪರಿಚಿತರ ಮೇಲೆಯೂ ಕಣ್ಣಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಡಿ ಭಾಗದ ಮಹಾರಾಜಗಂಜ್, ಸರಸ್ವತಿ, ಸಿದ್ಧಾರ್ಥ ನಗರ, ಬಹರೈಚ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಟುಟಿಬರಿ ಮತ್ತು ಸೊನೌಲಿ ಪ್ರದೇಶಗಳಲ್ಲಿನ ಔಟ್ಪೋಸ್ಟ್ ಗಳಲ್ಲಿ ಲೋಹ ಪರಿಶೋಧಕ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಜೊತೆಗೆ ಮಹಿಳಾ ಯೋಧರನ್ನು ಹಾಗೂ ಶ್ವಾನದಳ ವನ್ನೂ ನಿಯೋಜಿಸಲಾಗಿದೆ. ಒಟ್ಟಿನಲ್ಲಿ ರಾಮ ಮಂದಿರ ಶಂಕುಸ್ಥಾಪನೆ ಮತ್ತು ಸ್ವಾತಂತ್ರ್ಯ ದಿನದ ಕಾರ್ಯಕ್ರಮಗಳ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.