ಲಕ್ನೋ: ತನ್ನ ರಾಜ್ಯದಲ್ಲಿನ ಪ್ರಮುಖ ಆಸ್ತಿಗಳನ್ನು ರಕ್ಷಣೆ ಮಾಡುವ ಸಲುವಾಗಿ ಸಿಐಎಸ್ಎಫ್ ಮಾದರಿಯ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲು ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಸರ್ಕಾರ ಗುರುವಾರ ನಿರ್ಧರಿಸಿದೆ.
ಅಧಿಕೃತ ಮೂಲಗಳ ಪ್ರಕಾರ, ಭದ್ರತಾ ಸಮಸ್ಯೆಗಳನ್ನು ವೃತ್ತಿಪರವಾಗಿ ಎದುರಿಸಲು ಹೊಸ ಪಡೆ ಸಜ್ಜುಗೊಳ್ಳಲಿದೆ.
ವರದಿಗಳ ಪ್ರಕಾರ, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಹಣಕಾಸು ಸಂಸ್ಥೆಗಳು, ಧಾರ್ಮಿಕ ಸ್ಥಳಗಳು, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ವೈದ್ಯಕೀಯ ಸಂಸ್ಥೆಗಳು, ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳು ಇತ್ಯಾದಿಗಳಿಗೆ ಭದ್ರತೆ ಒದಗಿಸುವ ಈ ಪಡೆಯನ್ನು ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಹೊಸ ಪಡೆಯನ್ನು ರಚಿಸುವುದರಿಂದ ಯುವಕರಿಗೆ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಗೃಹ ಖಾತೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದರು.
ಮೊದಲ ಹಂತದಲ್ಲಿ ಎಸ್ಎಸ್ಎಫ್ನ ಐದು ಕಂಪನಿಗಳನ್ನು ಸ್ಥಾಪಿಸಲಾಗುವುದು ಮತ್ತು ಅವು ಪಿಎಸಿ ಕೇಂದ್ರ ಕಚೇರಿಯಿಂದ ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ಯುಪಿಎಸ್ಎಸ್ಎಫ್ ಸಿಬ್ಬಂದಿಗೆ ಆಧುನಿಕ ಭದ್ರತಾ ವ್ಯವಸ್ಥೆಗಳು ಮತ್ತು ಭದ್ರತಾ ಸಾಧನಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದಿದ್ದಾರೆ.
ಹೊಸ ಭದ್ರತಾ ಪಡೆಯ ಪ್ರಧಾನ ಕಚೇರಿಯನ್ನು ಲಕ್ನೋದಲ್ಲಿ ಸ್ಥಾಪಿಸಲಾಗುವುದು ಮತ್ತು ಮೊದಲ ಹಂತದಲ್ಲಿ ಐದು ಬೆಟಾಲಿಯನ್ಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.