ನವದೆಹಲಿ: ತ್ರಿವಳಿ ತಲಾಕ್ ನಿಷೇಧಕ್ಕಾಗಿ ಕಾನೂನು ರೂಪಿಸುವ ಮೂಲಕ ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಮಹಿಳಾ ಕಾಯ್ದೆ 2019 ರ ಪ್ರಥಮ ವರ್ಷವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಈ ಕಾಯ್ದೆ ಮುಸ್ಲಿಂ ಮಹಿಳೆಯರಲ್ಲಿ ಸ್ವಾಭಿಮಾನವನ್ನು ಹೆಚ್ಚಿಸುವಲ್ಲಿ ಪೂರಕವಾಗಿ ಕೆಲಸ ಮಾಡಿದೆ. ತ್ರಿವಳಿ ತಲಾಕ್ ರದ್ಧತಿಯ ಮೂಲಕ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ವೈವಾಹಿಕ ಬದುಕಿಗೆ ರಕ್ಷಣೆ ನೀಡುವ ಕೆಲಸವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವುದ ಎಂದು ಹೇಳಿದ್ದಾರೆ.
ಕೆಲವು ಪಕ್ಷಗಳು ಈ ವಿಚಾರವನ್ನು ರಾಜಕೀಯವಾಗಿ ಬಳಕೆ ಮಾಡಿಕೊಂಡವು. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಬಳಕೆ ಮಾಡಲು ಹುನ್ನಾರ ನಡೆಸಿದವು. ಆದರೆ ಮೋದಿ ಸರ್ಕಾರ ಇದನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳದೆ, ಅಲ್ಪಸಂಖ್ಯಾತರ ಭದ್ರತೆಯ ಹಿತದೃಷ್ಟಿಯಿಂದ ಜಾರಿಗೆ ತಂದಿತು ಎಂಬುದಾಗಿಯೂ ನಖ್ವಿ ತಿಳಿಸಿದ್ದಾರೆ.
ಈ ದಿನ ಮುಸ್ಲಿಂ ಮಹಿಳೆಯರ ದಿನ ಎಂದೇ ಬಿಂಬಿತವಾಗುವಂತೆ ಕೇಂದ್ರ ಸರ್ಕಾರ ಮಾಡಿದೆ ಎಂದೂ ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.