ಲಕ್ನೋ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯಲಿರುವ ಐತಿಹಾಸಿಕ ಭೂಮಿ ಪೂಜೆ ಸಮಾರಂಭಕ್ಕೆ ಕೇವಲ ಕೆಲವೇ ದಿನಗಳು ಬಾಕಿ ಇದೆ, ಈ ಹಿನ್ನೆಲೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಕ್ತರಿಗೆ ಸಮಗ್ರ ಮನವಿಯನ್ನು ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶುಕ್ರವಾರ ಮನವಿಯನ್ನು ಮಾಡಿಕೊಂಡಿರುವ ಆದಿತ್ಯನಾಥ ಅವರು, ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಜನರು ಯಾವುದೇ ಕಾರಣಕ್ಕೂ ಒಟ್ಟುಗೂಡಬಾರದು ಎಂದು ವಿನಂತಿಸಿಕೊಂಡಿದ್ದಾರೆ. ಈ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆಸಲಾಗುತ್ತಿದೆ.
ಸಿಎಂ ಆದಿತ್ಯನಾಥ ಅವರು ಇಡೀ ಸಮಾರಂಭವನ್ನು ದೂರದರ್ಶನ ಪರದೆಯಲ್ಲಿ ವೀಕ್ಷಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ, ಈ ಕಾರ್ಯಕ್ರಮವನ್ನು ರಾಮ ಜನ್ಮಭೂಮಿ ಸ್ಥಳದಿಂದ ನೇರ ಪ್ರಸಾರ ಮಾಡಲಾಗುತ್ತದೆ. ಆಗಸ್ಟ್ 4-5ರಂದು ಭಕ್ತರು ಹತ್ತಿರದ ದೇವಾಲಯಗಳಲ್ಲಿ ದೀಪ ಬೆಳಗಿಸಿ ಮತ್ತು ರಾಮಾಯಣವನ್ನು ಪಠಿಸುವ ಮೂಲಕ ಆಚರಣೆ ಮಾಡಬೇಕು ಎಂದು ಕೋರಿದ್ದಾರೆ.
ರಾಮ ಜನ್ಮಭೂಮಿ ಸ್ಥಳದಲ್ಲಿ ಅರ್ಚಕರು ಮತ್ತು ಅಯೋಧ್ಯೆಯ 12 ಭದ್ರತಾ ಸಿಬ್ಬಂದಿಗಳು ಕೋವಿಡ್ -19 ವೈರಲ್ ಕಾಯಿಲೆಗೆ ತುತ್ತಾದ ಒಂದು ದಿನದ ನಂತರ ಸಿಎಂ ಆದಿತ್ಯನಾಥ ಜನರಿಗೆ ಈ ಮನವಿಯನ್ನು ಮಾಡಿಕೊಂಡಿದ್ದಾರೆ.
ಅಯೋಧ್ಯೆಯಲ್ಲಿ ದೇವಾಲಯದ ನಿರ್ಮಾಣವು ಭಾರತದ ಮತ್ತು ಪ್ರಪಂಚದ ಕೋಟ್ಯಾಂತರ ರಾಮ ಭಕ್ತರಿಗೆ ಅವಿಸ್ಮರಣೀಯ ಕ್ಷಣವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.