ನವದೆಹಲಿ: ಅಫ್ಘಾನಿಸ್ಥಾನದಲ್ಲಿ ಚಿತ್ರಹಿಂಸೆಗೊಳಗಾದ ಸುಮಾರು 700 ಸಿಖ್ಖರನ್ನು ಮರಳಿ ಕರೆತರಲು ಭಾರತ ಸಿದ್ಧತೆ ನಡೆಸಿದೆ. ಈ ಸಿಖ್ಖರನ್ನು ಹಲವಾರು ಬ್ಯಾಚ್ಗಳಲ್ಲಿ ಮರಳಿ ತರಲಾಗುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬಂದ ನಂತರ, 11 ಸಿಖ್ಖರ ಮೊದಲ ಬ್ಯಾಚ್ ಜುಲೈ 26 ರಂದು ಭಾರತವನ್ನು ತಲುಪಿತ್ತು.
ಭಾರತಕ್ಕೆ ಬಂದ ಮೊದಲ ಬ್ಯಾಚ್ಗೆ ಬಿಜೆಪಿ ಮುಖಂಡರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ ನೀಡಿದ್ದರು.
ಸಿಖ್ ಕುಟುಂಬಗಳ ಮೊದಲ ಬ್ಯಾಚ್ ದೆಹಲಿಯ ಗುರುದ್ವಾರದಲ್ಲಿ ವಾಸಿಸುತ್ತಿದೆ. ದೆಹಲಿ ಸಿಖ್ ಗುರುದ್ವಾರ ಪ್ರಬಂಧಕ್ ಸಮಿತಿ ಅವರಿಗೆ ಜೀವನ ನಡೆಸಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸರ್ದಾರ್ ಆರ್.ಪಿ.ಸಿಂಗ್ ಶನಿವಾರ ಬಗ್ಗೆ ಮಾಹಿತಿ ನೀಡಿದ್ದು, “ಮೊದಲ ಬ್ಯಾಚ್ನ ನಂತರ ಸುಮಾರು 700 ಸಿಖ್ಖರು ಅಫ್ಘಾನಿಸ್ಥಾನದಿಂದ ಬರಲು ಸಿದ್ಧರಿದ್ದಾರೆ. ಅಫ್ಘಾನಿಸ್ಥಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅವರೊಂದಿಗೆ ಸಂಪರ್ಕದಲ್ಲಿದೆ. ಅವರನ್ನು ಮತ್ತೆ ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಅವರಲ್ಲಿ ಹೆಚ್ಚಿನವರ ಸಂಬಂಧಿಗಳು ತಿಲಕ್ ನಗರದಲ್ಲಿ ವಾಸಿಸುತ್ತಿದ್ದಾರೆ, ಆದ್ದರಿಂದ ಅವರಿಗೆ ಜೀವನ ವ್ಯವಸ್ಥೆ ಮಾಡುವಲ್ಲಿ ಯಾವುದೇ ತೊಂದರೆ ಇರುವುದಿಲ್ಲ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರದಿಂದಾಗಿ ಅಫ್ಘಾನಿಸ್ಥಾನದಲ್ಲಿ ಚಿತ್ರಹಿಂಸೆ ಅನುಭವಿಸುತ್ತಿರುವ ಸಿಖ್ ಸಹೋದರರನ್ನು ಮತ್ತೆ ಭಾರತಕ್ಕೆ ಕರೆತರಲಾಗುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.