ಚೆನ್ನೈ: ಆಗಸ್ಟ್ 5 ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರಿಂದ ಭೂಮಿ ಪೂಜೆ ನಡೆಯಲಿದ್ದು, ಆ ನಂತರದಲ್ಲಿ ಮಂದಿರ ನಿರ್ಮಾಣ ಕಾಮಗಾರಿಗಳು ನಡೆಯಲಿವೆ. ಭೂಮಿಪೂಜೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ಪುಣ್ಯಕ್ಷೇತ್ರಗಳಿಂದ ಇಟ್ಟಿಗೆಗಳು, ಮಣ್ಣು, ಮರಳು, ಪವಿತ್ರ ಜಲ ಇತ್ಯಾದಿಗಳನ್ನು ಅಯೋಧ್ಯೆಗೆ ತಲುಪಿಸಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪ್ರೇರಣೆ ಪಡೆದ ಸೇಲಂ ದೇಶೀಯ ಸೇವಾ ಸಮಿತಿ ರಾಮ ಮಂದಿರಕ್ಕೆ ನೀಡಲು 17.5 ಕೆ.ಜಿ. ತೂಕದ ಬೆಳ್ಳಿಯ ಇಟ್ಟಿಗೆಯನ್ನು ಕಳುಹಿಸಿಕೊಟ್ಟಿದೆ. ಈ ಬಗ್ಗೆ ಮಾತನಾಡಿರುವ ಆತ್ಮಾನಂದ ಸರಸ್ವತಿ ಸ್ವಾಮಿಗಳ್, ಈ ಬೆಳ್ಳಿಯ ಇಟ್ಟಿಗೆ ನಿರ್ಮಾಣಕ್ಕೆ ಜನರು ಬೆಳ್ಳಿಯನ್ನು ದಾನವಾಗಿ ನೀಡಿದ್ದಾರೆ. ಈ ಇಟ್ಟಿಗೆಯನ್ನು ಈಗಾಗಲೇ ಕಳುಹಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಜೊತೆಗೆ ತಮಿಳುನಾಡಿನ ಅನೇಕ ಪುಣ್ಯ ಸ್ಥಳಗಳಿಂದ ಪವಿತ್ರ ಜಲ, ಮಣ್ಣು ಸಂಗ್ರಹ ಮಾಡಲಾಗಿದೆ. ಈ ಎಲ್ಲಾ ಸುವಸ್ತುಗಳನ್ನು ಭೂಮಿಪೂಜೆಯ ಕಾರ್ಯಕ್ರಮದಲ್ಲಿ ಬಳಕೆ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ. ತಮಿಳುನಾಡು ಭಕ್ತಿ ಭೂಮಿಯಾಗಿದ್ದು, ಈ ಭೂಮಿಯಲ್ಲಿ ರಾಮ, ಕೃಷ್ಣ, ವಿಷ್ಣುವಿನ ಅನೇಕ ದೇವಾಲಯಗಳಿರುವುದಾಗಿಯೂ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಿಶ್ವ ಹಿಂದೂ ಪರಿಷತ್ ಸದಸ್ಯರು, ಪವಿತ್ರ ಜಲವನ್ನು ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರ, ಕನ್ಯಾಕುಮಾರಿಯಿಂದ ಸಂಗ್ರಹಿಸಲಾಗಿದೆ. ಈ ಎಲ್ಲಾ ವಸ್ತುಗಳನ್ನು ಅಯೋಧ್ಯೆಗೆ ಕಳುಹಿಸುವ ಮೊದಲು ಭಗವತಿ ಅಮ್ಮನ್ ದೇಗುಲದಲ್ಲಿ ಪೂಜೆ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಆತ್ಮಾನಂದ ಸರಸ್ವತಿ ಸ್ವಾಮಿಗಳ್ ಮತ್ತು ರಮಾನಂದ ಪುರಿ ಅವರು ಭಾಗವಹಿಸಿದ್ದಾಗಿಯೂ ತಿಳಿಸಿದ್ದಾರೆ. ಬೆಳ್ಳಿಯ ಇಟ್ಟಿಗೆಗೆ ಏಕಾಂಬರೇಶ್ವರ ಕಾಮಾಕ್ಷಿ ಅಮ್ಮನ ದೇಗುಲದಲ್ಲಿ ವಿಶೇಷ ವಿಶ್ವಕರ್ಮ ಪೂಜೆ ನಡೆಸಲಾಗಿದೆ ಎಂದೂ ವಿಎಚ್ಪಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.