ಬೆಂಗಳೂರು: ಕೊರೋನಾ ವೈರಸ್ ಹಾವಳಿಯ ನಡುವೆಯೇ ಸಾಲು ಸಾಲು ಹಬ್ಬ ಹರಿದಿನಗಳು ಬರುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ದೇಶದಾದ್ಯಂತ ಸಂಭ್ರಮ, ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದ ಗಣೇಶ ಚತುರ್ಥಿಯೂ ಬರಲಿದ್ದೂ, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಗ್ರಹ ತಯಾರಕರು ಗಣೇಶನ ಮೂರ್ತಿಗಳನ್ನು ತಯಾರಿಸುವಲ್ಲಿ ತೊಡಗಿಕೊಂಡಿದ್ದಾರೆ.
ಕೊರೋನಾ ಸಾಂಕ್ರಾಮಿಕದ ನಡುವೆಯೇ ಹಬ್ಬಗಳನ್ನು ಆಚರಣೆ ಮಾಡುವ ಸ್ಥಿತಿ ಇದ್ದರೂ, ವಿಗ್ರಹ ತಯಾರಕರು ಮಾತ್ರ ತಮ್ಮ ಕಾಯಕದಲ್ಲಿ ನಿರತರಾಗಿದ್ದಾರೆ. ಕೊರೋನಾ ಕರಾಳತೆಯ ನಡುವೆ ಜನಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ವಿಗ್ರಹ ತಯಾರಕರು ವೈದ್ಯರು, ದಾದಿಯರ ರೂಪದಲ್ಲಿರುವ ವಿಗ್ರಹಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಆ ಮೂಲಕ ನೋಡುಗರ ಗಮನ ಸೆಳೆಯುತ್ತಿದ್ದಾರೆ.
ರೋಗಿಗಳಿಗೆ ವೈದ್ಯರ ರೂಪದಲ್ಲಿ ಗಣೇಶ ತನ್ನ ವಾಹನ ಮೂಷಿಕನ ಜೊತೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವುದು, ರೋಗಿಯನ್ನು ಸ್ಟ್ರೆಚರ್ನಲ್ಲಿ ಎಳೆದುಕೊಂಡು ಹೋಗುತ್ತಿರುವ ಗಣಪತಿ ಸೇರಿದಂತೆ ಪರಿಸ್ಥಿತಿಗೆ ಅನುಗುಣವಾಗಿ ಮತ್ತಷ್ಟು ವಿಧದ ಗಣೇಶನ ಮೂರ್ತಿಗಳು ಕಲಾವಿದರ ಕೈಚಳಕದಲ್ಲಿ ಜೀವ ಪಡೆದಿವೆ.
ಈ ಬಗ್ಗೆ ಮಾತನಾಡಿರುವ ವಿಗ್ರಹ ತಯಾರಕರೊಬ್ಬರು, ಪ್ರಸ್ತುತ ಕೊರೋನಾ ಸಂದರ್ಭದಲ್ಲಿ ಲೋಕವನ್ನು ಸಂಕಷ್ಟದಿಂದ ಪಾರು ಮಾಡುವಂತೆ ವಿಘ್ನ ವಿನಾಶಕ ಗಣೇಶನನ್ನು ನಾವು ಪ್ರಾರ್ಥಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಈ ಬಾರಿ ಆಗಸ್ಟ್ 22 ರಂದು ಚೌತಿ ಹಬ್ಬ ಬಂದಿದ್ದು, ಕೋವಿಡ್ ಕಾರಣದಿಂದಾಗಿ ಹೆಚ್ಚು ಆಡಂಬರವಿಲ್ಲದೆ ಹಬ್ಬ ಆಚರಣೆ ಮಾಡಬೇಕಾಗಿದೆ. ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸರಳವಾಗಿ ಹಬ್ಬ ಆಚರಿಸುವಂತಾಗಿದೆ. ಹೀಗಿದ್ದರೂ ಬೆಂಗಳೂರಿನ ವಿಗ್ರಹ ತಯಾರಕರು ಗಣಪತಿಯ ವಿಗ್ರಹಗಳನ್ನು ತಯಾರಿಸುವಲ್ಲಿ ತೊಡಗಿಕೊಂಡಿದ್ದು, ತಮ್ಮ ಕಲೆಯ ಮೂಲಕವೇ ಕೊರೋನಾ ಅವಧಿಯ ದೇವರುಗಳಾಗಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುವ ಕೆಲಸವನ್ನೂ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.