ಲಕ್ನೋ: ಉತ್ತರಪ್ರದೇಶದ ಪವಿತ್ರ ಭೂಮಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಆಗಸ್ಟ್ 5ರಂದು ರಾಮಜನ್ಮಭೂಮಿ ಸ್ಥಳದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಲಿದೆ. ರಾಮಭಕ್ತರ ಹೋರಾಟದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಐತಿಹಾಸಿಕವಾಗಿದೆ.
ಐತಿಹಾಸಿಕ ಕ್ಷಣವನ್ನು ಸಂಭ್ರಮಿಸುವ ಸಲುವಾಗಿ ಆಗಸ್ಟ್ 4 ಮತ್ತು 5 ರಂದು ಹಣತೆಗಳನ್ನು ಹಚ್ಚುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜನತೆಗೆ ಕರೆ ನೀಡಿದ್ದಾರೆ. ರಾಮ ಜನ್ಮಭೂಮಿಯ ಸ್ಥಳದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಅವರು ಈ ಕರೆಯನ್ನು ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, “ಈ ಸಮಾರಂಭದಲ್ಲಿ ದೇಶದ ಎಲ್ಲಾ ಭಕ್ತರ ಪ್ರತಿನಿಧಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಸಂಭ್ರಮದ ದಿನದ ಪ್ರಯುಕ್ತ ಆಗಸ್ಟ್ 4 ಮತ್ತು 5 ರಂದು ಪ್ರತಿಯೋರ್ವ ಭಕ್ತರೂ ತಮ್ಮ ತಮ್ಮ ಮನೆಗಳಲ್ಲಿ ಹಣತೆಯನ್ನು ಹಚ್ಚುವ ಮೂಲಕ ಸಂಭ್ರಮದಲ್ಲಿ ಭಾಗಿಗಳಾಗಬೇಕು. ಅಲ್ಲದೆ ಧಾರ್ಮಿಕ ಕ್ಷೇತ್ರಗಳಲ್ಲಿ ದೀಪಾಲಂಕಾರ, ಅಖಂಡ ರಾಮಾಯಣ ಪಠಣ, ದೀಪೋತ್ಸವ ಮೊದಲಾದವುಗಳನ್ನು ಆಯೋಜಿಸಬೇಕು, ಆ ಮೂಲಕ ರಾಮ ಮಂದಿರ ನಿರ್ಮಾಣಕ್ಕಾಗಿ ಬದುಕನ್ನೇ ಮುಡಿಪಿಟ್ಟ ಹಿರಿಯರಿಗೆ ಗೌರವ ಸಲ್ಲಿಸಬೇಕು” ಎಂದು ಯೋಗಿ ತಿಳಿಸಿದ್ದಾರೆ.
ಕೊರೋನಾ ಕಾರಣದಿಂದಾಗಿ ಕೇವಲ ಕೆಲವೇ ಜನರು ಆಹ್ವಾನಿತರಿಗೆ ಈ ಸಮಾರಂಭದಲ್ಲಿ ಭಾಗಿಗಳಾಗಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಕೋಟ್ಯಂತರ ಭಕ್ತರ ಪ್ರತಿನಿಧಿಯಾಗಿ ಪ್ರಧಾನಿ ಅವರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 175 ರಿಂದ 200 ಜನರಷ್ಟೇ ಭೂಮಿಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ಇದೇ ವೇಳೆ ಮುಖ್ಯಮಂತ್ರಿ ಯೋಗಿ ಅವರು ಹನುಮಾನ್ ಗರ್ಹಿ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.