ನವದೆಹಲಿ: ಅಯೋಧ್ಯಾ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಮರ ಕಡೆಯಿಂದ ದಾವೆ ಹೂಡಿದವರಲ್ಲಿ ಒಬ್ಬರಾಗಿದ್ದ ಇಕ್ಬಾಲ್ ಅನ್ಸಾರಿ ಅವರಿಗೂ ಆ.5ರ ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಆಹ್ವಾನವನ್ನು ನೀಡಲಾಗಿದೆ. ಅವರಿಗೆ ಮೊದಲ ಆಮಂತ್ರಣ ಪತ್ರಿಕೆಯನ್ನು ನೀಡಲಾಗಿತ್ತು. ಈ ಆಮಂತ್ರಣವನ್ನು ಅವರು ಸ್ವೀಕಾರ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಆಹ್ವಾನವನ್ನು ಪಡೆದ ನಂತರ ಮಾತನಾಡಿದ ಅನ್ಸಾರಿ, “ನಾನು ಮೊದಲ ಆಹ್ವಾನವನ್ನು ಸ್ವೀಕರಿಸಬೇಕೆಂಬುದು ಭಗವಾನ್ ರಾಮನ ಆಶಯವಾಗಿರಬೇಕು ಎಂದು ನಾನು ನಂಬುತ್ತೇನೆ. ನಾನು ಅದನ್ನು ಸ್ವೀಕರಿಸುತ್ತೇನೆ” ಎಂದಿದ್ದಾರೆ.
ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಅಡಿಪಾಯ ಹಾಕುವ ಸಮಾರಂಭ ನಡೆಯಲಿದೆ. ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣದ ಆರಂಭವನ್ನು ಸೂಚಿಸುವ ಈ ಬಹು ನಿರೀಕ್ಷಿತ ಕಾರ್ಯಕ್ರಮವು ಹಲವಾರು ಉನ್ನತ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ.
ಕೇಸರಿ ಬಣ್ಣದ ಆಮಂತ್ರಣ ಪತ್ರಿಕೆಯಲ್ಲಿ ಪಿಎಂ ಮೋದಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಮತ್ತು ಯುಪಿ ಗವರ್ನರ್ ಆನಂದಿಬೆನ್ ಪಟೇಲ್ ಅವರ ಹೆಸರುಗಳಿವೆ.
ಸಮಾರಂಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಲವಾರು ಉನ್ನತ ನಾಯಕರು ಮತ್ತು ಧಾರ್ಮಿಕ ಮುಖಂಡರು ಸೇರಿದಂತೆ ಸುಮಾರು 180 ಜನರು ಹಾಜರಾಗುವ ನಿರೀಕ್ಷೆಯಿದೆ. ಈ ಮೊದಲು, 200 ಕ್ಕೂ ಹೆಚ್ಚು ಜನರನ್ನು ಅತಿಥಿ ಪಟ್ಟಿಯಲ್ಲಿ ಸೇರಿಸಲಾಗಿತ್ತು, ಆದರೆ ನಂತರ ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಸಂಖ್ಯೆಯನ್ನು 170-180ಕ್ಕೆ ಇಳಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.