ನವದೆಹಲಿ: ಪಾಕಿಸ್ಥಾನವು ಭಯೋತ್ಪಾದನೆಯ ಕೇಂದ್ರ ಸ್ಥಾನವಾಗಿದೆ. ಉಗ್ರಗಾಮಿ ಸಂಘಟನೆಗಳನ್ನು ಕಾಪಾಡುವ ಕೆಲಸವನ್ನು ಪಾಕಿಸ್ಥಾನ ಮಾಡುತ್ತಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ತಿಳಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದ ವೇಳೆ ಪಾಕಿಸ್ಥಾನದ ಉಗ್ರ ಪ್ರೇರಿತ ಕುಕೃತ್ಯಗಳ ವಿರುದ್ಧ ಕಿಡಿ ಕಾರಿರುವ ಅವರು, ಪಾಕಿಸ್ಥಾನ ಉಗ್ರಗಾಮಿ ಸಂಘಟನೆಗಳಿಗೆ ಹುಟ್ಟು ನೀಡಿರುವ ತವರು ಎಂದು ತಿಳಿಸಿದ್ದಾರೆ. ಜಾಗತಿಕವಾಗಿ ಉಗ್ರಗಾಮಿ ಸಂಘಟನೆಗಳೆಂದು ಗುರುತಿಸಲ್ಪಟ್ಟಿರುವ ಹೆಚ್ಚಿನ ಸಂಘಟನೆಗಳ ಮೂಲ ಪಾಕಿಸ್ಥಾನವೇ ಆಗಿದ್ದು, ಈ ಎಲ್ಲವುಗಳನ್ನೂ ಪೋಷಿಸುವ ಕೆಲಸವನ್ನು ಆ ದೇಶ ಮಾಡುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಲ ಸಮಯದ ಹಿಂದೆ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್, ದೇಶದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಉಗ್ರರಿದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬೇರೆ ಬೇರೆ ದೇಶಗಳ ಮೇಲಿನ ದಾಳಿಗಳನ್ನು ತಮ್ಮ ನೆಲದ ಉಗ್ರರು ನಡೆಸುತ್ತಿರುವ ಬಗ್ಗೆಯೂ ಅವರು ಒಪ್ಪಿಕೊಂಡಿದ್ದರು ಎಂದು ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ಅನಲಿಟಿಕಲ್ ಸಪೋರ್ಟ್ ಆಂಡ್ ಸ್ಯಾಂಕ್ಷನ್ ಮಾನಿಟರಿಂಗ್ ಟೀಮ್ ನ 26 ನೇ ವರದಿಯಲ್ಲಿ, ಬೇರೆ ಬೇರೆ ದೇಶಗಳ ಮೇಲಿನ ಉಗ್ರರ ದಾಳಿಯ ಹಿಂದೆ ಪಾಕಿಸ್ಥಾನದ ಕೈವಾಡ ಇರುವುದನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಅಲ್ ಖೈದಾ, ಐಸಿಸ್ ನಂತಹ ಅನೇಕ.ಭಯೋತ್ಪಾದಕ ಸಂಘಟನೆಗಳಿಗೂ ಪಾಕಿಸ್ಥಾನ ಆರ್ಥಿಕ ನೆರವನ್ನು ನೀಡುವ ಮೂಲಕ ಅವುಗಳನ್ನು ಬೆಳೆಸುವ ಕೆಲಸವನ್ನು ಮಾಡುತ್ತಿರುವುದಾಗಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹೆಚ್ಚಿನ ಉಗ್ರ ಸಂಘಟನೆಗಳ ನಾಯಕರ ಮೂಲವೂ ಪಾಕಿಸ್ಥಾನವೇ ಆಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.