ಜಬಲ್ಪುರ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಕೋಟ್ಯಂತರ ಜನರ ಆಶಯವಾಗಿದೆ. ರಾಮ ಜನ್ಮಭೂಮಿಯಲ್ಲೇ ಮಂದಿರ ನಿರ್ಮಾಣವಾಗಬೇಕು ಎಂಬ ಕಾರಣಕ್ಕೆ ನಮ್ಮ ಹಿರಿಯರು ಹಲವಾರು ಹೋರಾಟಗಳನ್ನು ನಡೆಸುತ್ತಾ ಬಂದಿದ್ದಾರೆ. ಅನೇಕರು ಅಪರಿಮಿತ ತ್ಯಾಗವನ್ನು ಮಾಡಿದ್ದಾರೆ. ಅಂತಹವರಲ್ಲಿ ಮಧ್ಯಪ್ರದೇಶದ ಜಬಲ್ಪುರದ ವಯೋವೃದ್ಧ ಮಹಿಳೆ ಊರ್ಮಿಳಾ ಚತುರ್ವೇದಿ ಕೂಡ ಒಬ್ಬರು. ಅಯೋಧ್ಯೆಯಲ್ಲಿ ರಾಮ ಮಂದಿರವಾಗಬೇಕು ಎಂಬ ಸಂಕಲ್ಪ ತೊಟ್ಟು ಅವರು ಕಳೆದ 28 ವರ್ಷಗಳಿಂದ ಉಪವಾಸ ಮಾಡುತ್ತಿದ್ದಾರೆ.
ವರದಿಗಳ ಪ್ರಕಾರ, 1992ರಲ್ಲಿ ಅಯೋಧ್ಯೆಯ ವಿವಾದಿತ ರಚನೆ ನೆಲಸಮಗೊಂಡ ಸಂದರ್ಭದಲ್ಲಿ ಊರ್ಮಿಳಾ ಅವರು ಆಹಾರ ಸೇವನೆಯನ್ನು ತ್ಯಜಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವ ಸಂದರ್ಭದಲ್ಲಿ ಮಾತ್ರ ನಾನು ಆಹಾರ ಸೇವಿಸುತ್ತೇನೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.
1992 ಡಿಸೆಂಬರ್ 6ರಿಂದ ಅವರು ಹಣ್ಣು-ಹಂಪಲು, ಮೊಸರು ಮತ್ತು ಹಾಲನ್ನು ಮಾತ್ರ ಸೇವಿಸುತ್ತಿದ್ದಾರೆ. ತಮ್ಮ ಬಹುತೇಕ ಸಮಯವನ್ನು ರಾಮಾಯಣ ಪಠಣ ಮಾಡುವ ಮೂಲಕ, ಪ್ರಾರ್ಥನೆ ಮಾಡುವ ಮೂಲಕ ಕಳೆಯುತ್ತಿದ್ದಾರೆ.
ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದ ಬಳಿಕವೇ ಆಹಾರ ಸೇವಿಸಬೇಕು ಎಂಬ ಇಂಗಿತವನ್ನು ಅವರು ಪ್ರಸ್ತುತ ವ್ಯಕ್ತಪಡಿಸಿದ್ದಾರೆ. ಭೂಮಿ ಪೂಜೆಗೆ ತೆರಳುವ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.