ಅಯೋಧ್ಯೆ: ಇಂದು ಭಾರತಕ್ಕೆ ಐತಿಹಾಸಿಕ ದಿನ. ರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಭೂಮಿ ಪೂಜೆ ನೆರವೇರುತ್ತಿದೆ. ಬೆಳಿಗ್ಗೆ 8 ಗಂಟೆಯಿಂದಲೇ ಅಲ್ಲಿ ಧಾರ್ಮಿಕ ವಿಧಿ ವಿಧಾನ ಆರಂಭಗೊಂಡಿದೆ. ಸಂಪ್ರದಾಯದಂತೆ ಗಣೇಶ ಪೂಜೆ ನೆರವೇರುತ್ತಿದೆ. ಶುಭ ಮುಹೂರ್ತ ಮಧ್ಯಾಹ್ನ 12:40ರ ಸುಮಾರಿಗೆ ಭೂಮಿ ಪೂಜೆ ನೆರವೇರಲಿದೆ.
ಅಯೋಧ್ಯೆ ಈಗಾಗಲೇ ಜಗಮಗಿಸುತ್ತಿದೆ. ಅಲ್ಲಿ ನಡೆಯುವ ವಿಧಿ ವಿಧಾನಗಳನ್ನು ನೇರಪ್ರಸಾರದ ಮೂಲಕ ವೀಕ್ಷಿಸಲು ಪವಿತ್ರ ನಗರದಾದ್ಯಂತ ಬೃಹತ್ ಸಿಸಿಟಿವಿ ಪರದೆಗಳನ್ನು ಸ್ಥಾಪಿಸಲಾಗಿದೆ. ಪಿಎಂ ಮೋದಿ ವಿಶೇಷ ಜೆಟ್ನಲ್ಲಿ ಬೆಳಿಗ್ಗೆ 9.30 ಕ್ಕೆ ನವದೆಹಲಿಯಿಂದ ಲಕ್ನೋಗೆ ಹಾರಲಿದ್ದಾರೆ. ಲಕ್ನೋದಲ್ಲಿ ಇಳಿದ ನಂತರ, ಅವರು ಅಯೋಧ್ಯೆಗೆ ಹೆಲಿಕಾಫ್ಟರ್ ಹತ್ತುತ್ತಾರೆ. ಅಯೋಧ್ಯೆಯಲ್ಲಿ ಇಳಿದ ನಂತರ ಪಿಎಂ ಮೋದಿ ಅವರು ಹನುಮಾನ್ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ.
ಪಿಎಂ ಮೋದಿಯವರಲ್ಲದೆ, ಭೂಮಿ ಪೂಜೆ ಸಮಾರಂಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ರಾಮ ಮಂದಿರ ಚಳವಳಿಯ ಹಲವಾರು ಪ್ರಮುಖ ಮುಖಗಳಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಮತ್ತು ಉಮಾ ಭಾರತಿ ಅವರು ಕೊರೋನಾವೈರಸ್ ಕಾರಣದಿಂದಾಗಿ ಸಮಾರಂಭಕ್ಕೆ ಆಗಮಿಸುತ್ತಿಲ್ಲ. ಆದರೆ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಚರಣೆಗಳನ್ನು ಸೇರುತ್ತಾರೆ ಎಂದು ನಿರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.