ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಡೆಯುವ ಭೂಮಿ ಪೂಜೆಯು ಪ್ರತಿ ಭಾರತೀಯನಿಗೆ ಐತಿಹಾಸಿಕ ಮತ್ತು ಭಾವನಾತ್ಮಕ ಕ್ಷಣವಾಗಿದೆ ಎಂದು ಬಿಜೆಪಿ ಧುರೀಣ ಎಲ್.ಕೆ ಅಡ್ವಾಣಿ ಅಭಿಪ್ರಾಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, 1990ರಲ್ಲಿ ಸೋಮನಾಥದಿಂದ ಅಯೋಧ್ಯೆಗೆ ನಡೆದ ರಾಮ ರಥ ಯಾತ್ರೆಯನ್ನು ಸ್ಮರಿಸಿಕೊಂಡಿದ್ದಾರೆ.
ಶ್ರೀ ರಾಮ ಮಂದಿರವು ಭಾರತವನ್ನು ಸದೃಢ, ಸಮೃದ್ಧ, ಶಾಂತಿಯುತ ಮತ್ತು ಸಾಮರಸ್ಯದ ರಾಷ್ಟ್ರವಾಗಿ ಪ್ರತಿನಿಧಿಸುತ್ತದೆ ಮತ್ತು ಎಲ್ಲರಿಗೂ ನ್ಯಾಯ ಒದಗಿಸಲಿದೆ ಮತ್ತು ಉತ್ತಮ ಆಡಳಿತದ ಸಂಕೇತ ರಾಮ ರಾಜ್ಯವನ್ನು ಪ್ರತಿನಿಧಿಸುತ್ತದೆ ಎಂದಿದ್ದಾರೆ.
“ರಾಮ ಜನ್ಮಭೂಮಿ ಚಳವಳಿಯ ಸಮಯದಲ್ಲಿ, 1990ರಲ್ಲಿ ಸೋಮನಾಥದಿಂದ ಅಯೋಧ್ಯೆಯವರೆಗೆ ರಾಮ ರಥಯಾತ್ರೆಯ ರೂಪದಲ್ಲಿ ಒಂದು ಪ್ರಮುಖ ಕರ್ತವ್ಯವನ್ನು ನಿರ್ವಹಿಸಿದೆ ಎಂಬುದಕ್ಕೆ ನಾನು ವಿನಮ್ರನಾಗಿದ್ದೇನೆ, ಇದು ರಥಯಾತ್ರೆಯಲ್ಲಿ ಭಾಗವಹಿಸಿದ ಅಸಂಖ್ಯಾತರ ಆಕಾಂಕ್ಷೆಗಳು, ಶಕ್ತಿಗಳು ಮತ್ತು ಭಾವನೆಗಳು ತುಂಬಿ ಬರುವಂತೆ ಮಾಡಿದೆ” ಎಂದು ಅವರು ಹೇಳಿದ್ದಾರೆ.
“ಶ್ರೀ ರಾಮ ಭಾರತದ ಸಾಂಸ್ಕೃತಿಕ ಮತ್ತು ನಾಗರಿಕ ಪರಂಪರೆಯಲ್ಲಿ ಗೌರವಾನ್ವಿತ ಸ್ಥಾನವನ್ನು ಪಡೆದಿದ್ದಾನೆ ಮತ್ತು ಇದು ಅನುಗ್ರಹ, ಘನತೆ ಮತ್ತು ವೈಭವದ ಸಾಕಾರವಾಗಿದೆ. ಈ ದೇವಾಲಯವು ಎಲ್ಲಾ ಭಾರತೀಯರಿಗೆ ಅವರ ಸದ್ಗುಣಗಳನ್ನು ಪ್ರಚೋದಿಸಲು ಪ್ರೇರೇಪಿಸುತ್ತದೆ ಎಂಬುದು ನನ್ನ ನಂಬಿಕೆ” ಎಂದು ಅವರು ಹೇಳಿದ್ದಾರೆ.
“ಜೀವನದಲ್ಲಿ ಕೆಲವೊಂದು ಕನಸುಗಳು ಈಡೇರಲು ಬಹು ಸಮಯ ಬೇಕಾಗುತ್ತದೆ. ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರದ ನಿರ್ಮಾಣವಾಗಬೇಕು ಎನ್ನುವ ನನ್ನ ಬಹು ದಿನದ ಕನಸು ಈಗ ನೆರವೇರುತ್ತಿದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.