ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರುತ್ತಿರುವ ಶುಭ ಸಂದರ್ಭದಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಭಾರತದ ಸಂವಿಧಾನದ ಒರಿಜಿನಲ್ ಡಾಕ್ಯುಮೆಂಟ್ನಲ್ಲಿರುವ ವಿಶಿಷ್ಟ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ರಾಮ, ಸೀತಾ ಮತ್ತು ಲಕ್ಷಣರು ರಾವಣನನ್ನು ಸಂಹರಿಸಿ ಅಯೋಧ್ಯೆಗೆ ಮರಳುತ್ತಿರುವ ದೃಶ್ಯವಿದೆ.
ಈ ಚಿತ್ರವು ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳು ಅಧ್ಯಾಯದ ಆರಂಭದಲ್ಲಿ ಇದೆ ಎಂದು ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.
ಟ್ವಿಟ್ ಮಾಡಿರುವ ಅವರು, “ಭಾರತದ ಸಂವಿಧಾನದ ಮೂಲ ದಾಖಲೆಯಲ್ಲಿ ಭಗವಾನ್ ರಾಮ, ಮಾತಾ ಸೀತಾ ಮತ್ತು ಲಕ್ಷ್ಮಣರು ರಾವಣನನ್ನು ಸೋಲಿಸಿದ ನಂತರ ಅಯೋಧ್ಯೆಗೆ ಮರಳುವ ಸುಂದರವಾದ ರೇಖಾಚಿತ್ರವನ್ನು ಹೊಂದಿದೆ. ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ಅಧ್ಯಾಯದ ಆರಂಭದಲ್ಲಿ ಇದು ಲಭ್ಯವಿದೆ. ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತೇನೆ” ಎಂದಿದ್ದಾರೆ.
ಸುಪ್ರೀಂಕೋರ್ಟ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ತೀರ್ಪು ನೀಡಿದ 8 ತಿಂಗಳ ಬಳಿಕ ಭವ್ಯ ಮಂದಿರ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರುತ್ತಿದೆ.
Original document of the Constitution of India has a beautiful sketch of Lord Ram, Mata Sita and Laxman returning to Ayodhya after defeating Ravan.
This is available at the beginning of the chapter related to Fundamental Rights.
Felt like sharing this with you all.#JaiShriRam pic.twitter.com/jCV9d8GWTO— Ravi Shankar Prasad (@rsprasad) August 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.