ತಮಿಳುನಾಡು: ರಾಷ್ಟ್ರದ ಮರ್ಯಾದೆ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯಲ್ಲಿ ಅವನಿಗೆ ಮಂದಿರ ನಿರ್ಮಾಣ ಮಾಡಲು ಇದೀಗ ಕಾಲ ಕೂಡಿ ಬಂದಿದೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರೂ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ದೇಶದ ಜನರು ಸಂಭ್ರಮದಲ್ಲಿ ತೇಲಾಡುತ್ತಿದ್ದಾರೆ. ಈ ಹಲವು ಶತಮಾನದ ಐತಿಹಾಸಿಕ ಕನಸು ನನಸಾಗುವ ಖುಷಿಯಲ್ಲಿ ತಮಿಳುನಾಡಿನ ಕೊಯಮತ್ತೂರಿನ ಮಿನಿಯೇಚರ್ ಕಲಾವಿದರೊಬ್ಬರು 1 ಇಂಚಿನ ಚಿನ್ನದ ರಾಮನ ಪ್ರತಿಮೆಯನ್ನು ನಿರ್ಮಿಸಿ, ಅವನಿಗೆ ಗೌರವ ಅರ್ಪಿಸಿದ್ದಾರೆ.
ಅಯೋಧ್ಯೆಯಲ್ಲಿ ನಡೆಯಲಿಯುವ ಭೂಮಿ ಪೂಜೆಯ ಸವಿ ನೆನಪಿಗಾಗಿ ಕಲಾವಿದ ಮರಿಯಪ್ಪನ್ ಅವರು ಈ ಪ್ರತಿಮೆ ತಯಾರಿಸಿದ್ದಾರೆ. ಇದಕ್ಕಾಗಿ ಅವರು 1.2 ಗ್ರಾಂ ಚಿನ್ನವನ್ನು ಬಳಕೆ ಮಾಡಿದ್ದಾರೆ ಮತ್ತು ಈ ಪ್ರತಿಮೆಯನ್ನು ರಾಮ ಮಂದಿರ ಟ್ರಸ್ಟ್ಗೆ ಕಳುಹಿಸಲಿರುವುದಾಗಿಯೂ ತಿಳಿಸಿದ್ದಾರೆ.
ರಾಮ ಮಂದಿರ ನಿರ್ಮಾಣ ಕನಸು ನನಸಾಗುವ ಈ ಸಂದರ್ಭದಲ್ಲಿ ತಮ್ಮ ಭಕ್ತಿಗೆ ವಿವಿಧ ರೂಪ ಕೊಡುವ ಕೆಲಸವನ್ನು ಅನೇಕರು ಮಾಡುತ್ತಿದ್ದು, ಮರಿಯಪ್ಪನ್ ಅವರು ಚಿನ್ನದ ರಾಮನ ಪುಟ್ಟ ಪ್ರತಿಮೆ ಸೃಷ್ಟಿಸಿ ಈಗ ಸುದ್ದಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.