ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಪ್ರಸ್ತುತ ಅವರು ಜನ್ಮಭೂಮಿಯಲ್ಲಿ ಭೂಮಿಪೂಜೆಯನ್ನು ನೆರವೇರಿಸಿದ್ದಾರೆ.
ರಾಮಲಲ್ಲಾ ವಿರಾಜಮಾನನಾದ ತಾತ್ಕಾಲಿಕ ಗರ್ಭಗುಡಿಗೆ ತೆರಳಿದ ಅವರು, ಅಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಬಳಿಕ ಭೂಮಿ ಪೂಜೆಯ ಆವರಣಕ್ಕೆ ತೆರಳಿದರು.
ಪ್ರಧಾನಿ ನರೇಂದ್ರ ಮೋದಿಯವರು ರಾಮಲಲ್ಲಾನ ಮುಂದೆ ಸಾಷ್ಟಾಂಗ ನಮಸ್ಕಾರವನ್ನು ಮಾಡುತ್ತಿರುವ ವೀಡಿಯೋಗಳನ್ನು ಮಾಧ್ಯಮಗಳು ಪ್ರಸಾರ ಮಾಡಿವೆ. ಬಳಿಕ ಅವರು ಹೂವು ಅರ್ಪಣೆ ಮಾಡಿದರು ಮತ್ತು ಆರತಿಯನ್ನು ಬೆಳಗಿಸಿದರು.
ಅಲ್ಲದೇ ಪ್ರಧಾನಿ ಮೋದಿಯವರು ಪಾರಿಜಾತ ಗಿಡವನ್ನು ಈ ಸಂದರ್ಭದಲ್ಲಿ ನೆಟ್ಟರು, ಧಾರ್ಮಿಕ ವಿಧಿ-ವಿಧಾನಗಳನ್ನು ಆರಂಭಿಸಿದರು.
ಬೆಳಗ್ಗೆ ಅವರು ಹನುಮಾನ್ ಗರ್ಹಿ ದೇಗುಲಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ಮೋದಿ ಭೂಮಿ ಪೂಜೆಯ ಸಂದರ್ಭದಲ್ಲಿ ಬೆಳ್ಳಿ ಇಟ್ಟಿಗೆಯನ್ನು ಸಮರ್ಪಣೆ ಮಾಡಿದರು.
#WATCH Prime Minister Narendra Modi offers prayers to Ram Lalla, performs ‘sashtang pranam’ (prostration) at Ram Janmabhoomi site in Ayodhya pic.twitter.com/G6aNfMTsLC
— ANI (@ANI) August 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.