ನವದೆಹಲಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕಿದ ಬಳಿಕ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಸಂಸ್ಕೃತಿ, ಮೌಲ್ಯಗಳ ರಕ್ಷಣೆಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಕಾರಣದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾ ಅವರು, ಟ್ವೀಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಭಾರತದ ಪಾಲಿಗೆ ಇಂದು ಸುದಿನ. ಐತಿಹಾಸಿಕ ಘಟನೆಯೊಂದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ರಾಮನ ಜನ್ಮಭೂಮಿಯಲ್ಲಿಯೇ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ. ಈ ದಿನವನ್ನು ಭಾರತೀಯ ಸಂಸ್ಕೃತಿಯ, ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ಹಲವು ಶತಮಾನಗಳಿಂದ ದೇಶ ಕಂಡ ಕನಸಾಗಿದೆ. ಆ ಕನಸು ಮೋದಿ ಅವರಂತಹ ನಿರ್ಣಾಯಕ ನಾಯಕತ್ವದ ಕಾರಣದಿಂದಾಗಿ ನನಸಾಗುತ್ತಿದೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗಬೇಕೆನ್ನುವ ಕೋಟ್ಯಂತರ ಭಕ್ತರ ನಂಬಿಕೆ, ಆಶಯಗಳಿಗೆ ಗೌರವ ಸಲ್ಲಿಸುವ ಕೆಲಸವನ್ನು ಮೋದಿ ನೇತೃತ್ವದ ಸರ್ಕಾರ ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಮಾಡಿದೆ ಎಂದು ಶಾ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
आज का दिन भारत के लिए एक ऐतिहासिक व गौरवपूर्ण दिन है।
प्रभु श्री राम की जन्मभूमि पर प्रधानमंत्री @NarendraModi जी द्वारा भव्य राम मंदिर का भूमि पूजन व शिलान्यास किया गया, जिसने महान भारतीय संस्कृति व सभ्यता के इतिहास का एक स्वर्णिम अध्याय लिखा है और एक नए युग की शुरुआत की है।
— Amit Shah (@AmitShah) August 5, 2020
अयोध्याजी में राम मंदिर निर्माण सदियों से दुनिया भर के हिंदुओं की आस्था का प्रतीक रहा है।
आज पीएम @NarendraModi और श्री राम जन्मभूमि तीर्थ क्षेत्र ने राम मंदिर का भूमिपूजन करके करोड़ों लोगों की आस्था को सम्मान देने का काम किया है, इसके लिए मैं उनका हृदय से आभार व्यक्त करता हूँ।
— Amit Shah (@AmitShah) August 5, 2020
इस भव्य प्रभु श्री राम मंदिर का निर्माण प्रधानमंत्री @NarendraModi जी के मजबूत और निर्णायक नेतृत्व को दर्शाता है।
इस अविस्मरणीय दिन पर सभी भारतवासियों को मेरी हार्दिक शुभकामनाएं। मोदी सरकार भारतीय संस्कृति और उसके मूल्यों की रक्षा व संरक्षण के लिए हमेशा कटिबद्ध रहेगी।
— Amit Shah (@AmitShah) August 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.