ಶ್ರೀನಗರ: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಸದಸ್ಯರನ್ನು ಉಗ್ರರು ಗುರಿಯಾಗಿಸಿಕೊಂಡು ಹತ್ಯೆಗಳನ್ನು ಮಾಡುತ್ತಿದ್ದಾರೆ. ಗುರುವಾರ ಕುಲ್ಗಾಂ ಜಿಲ್ಲೆಯ ವೆಸ್ಸು ಪ್ರದೇಶದಲ್ಲಿ ಬಿಜೆಪಿ ಸರ್ಪಂಚ್ ಒಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತಪಟ್ಟ ಸರ್ಪಂಚ್ ಅವರನ್ನು ಸಜ್ಜಾದ್ ಅಹ್ಮದ್ ಖಂಡೇ ಎಂದು ಗುರುತಿಸಲಾಗಿದೆ.
ಖಂಡೇ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರ ಹತ್ಯೆಯ ಜವಾಬ್ದಾರಿಯನ್ನು ಇದುವರೆಗೆ ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ. ಖಂಡೇ ಅವರು ಭದ್ರತೆಯುಳ್ಳ ವಲಸಿಗ ಶಿಬಿರದಲ್ಲಿ ಇತರ ಸರಪಂಚರೊಂದಿಗೆ ವಾಸಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಅವರು ಶಿಬಿರವನ್ನು ಬಿಟ್ಟು ಮನೆಗೆ ತೆರಳಿದ್ದರು. ಈ ವೇಳೆ ಅವರ ಮೇಲೆ ಗುಂಡು ಹಾರಿಸಲಾಗಿದೆ.
ಗುಂಡು ಹಾರಿದ ವೇಳೆ ಅವರು ತಮ್ಮ ಮನೆಯಿಂದ 20 ಮೀಟರ್ ದೂರದಲ್ಲಿ ಇದ್ದರು ಎಂದು ಹೇಳಲಾಗಿದೆ.
48 ಗಂಟೆಯಲ್ಲಿ ಬಿಜೆಪಿ ಸರಪಂಚ್ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಇದಕ್ಕೂ ಮುನ್ನ ಆರೀಫ್ ಅಹ್ಮದ್ ಮೇಲೆ ದಾಳಿ ನಡೆದಿದ್ದು, ಅವರು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.