ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕಿ, ಕೇಂದ್ರ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ಅವರ ಮೊದಲ ಪುಣ್ಯತಿಥಿಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆನಪಿಸಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಸುಷ್ಮಾ ಸ್ವರಾಜ್ ಅವರ ಮೊದಲ ಪುಣ್ಯತಿಥಿಯಾಗಿರುವ ಇಂದು ಅವರನ್ನು ನೆನಪಿಸಿಕೊಳ್ಳುತ್ತಿದ್ದೇನೆ, ಸುಷ್ಮಾ ಅವರು ನಿಸ್ವಾರ್ಥ ಮನಸ್ಸಿನಿಂದ ದೇಶಕ್ಕಾಗಿ ಸೇವೆ ಸಲ್ಲಿಸಿದರು ಮತ್ತು ವಿದೇಶದಲ್ಲಿ ಭಾರತದ ಸ್ಪಷ್ಟ ಧ್ವನಿಯಾಗಿ ಗುರುತಿಸಿಕೊಂಡವರಲ್ಲಿ ಒಬ್ಬರಾಗಿದ್ದರು, ಅವರ ಅಕಾಲಿಕ ನಿಧನ ತುಂಬಲಾರದ ನಷ್ಟವಾಗಿದೆ, ದುಃಖವನ್ನು ಉಂಟು ಮಾಡಿದೆ” ಎಂದೂ ತಿಳಿಸಿದ್ದಾರೆ.
ವಾಜಪೇಯಿ ಅವರ ಪ್ರೀತಿಯ ಶಿಷ್ಯೆಯಾಗಿದ್ದ ಸುಷ್ಮಾ ಸ್ವರಾಜ್ ಅವರು ಕಳೆದ ಬಾರಿ ಮೋದಿ ಆಡಳಿತದ ಅವಧಿಯಲ್ಲಿ ಕೇಂದ್ರದ ವಿದೇಶಾಂಗ ಸಚಿವೆಯಾಗಿ ಮಹತ್ವದ ಅನೇಕ ಕೆಲಸಗಳನ್ನು ಮಾಡಿದ್ದರು. ಜೊತೆಗೆ ಭಾರತದ ಪ್ರತಿನಿಧಿಯಾಗಿ ವಿದೇಶಿ ವ್ಯವಹಾರಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.
ಸುಷ್ಮಾ ಪುಣ್ಯತಿಥಿಯಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಶ್ರೀ ರಾಮುಲು ಸೇರಿದಂತೆ ಅನೇಕ ಗಣ್ಯರು ಅವರಿಗೆ ಗೌರವ ನಮನವನ್ನು ಅರ್ಪಿಸಿದ್ದಾರೆ.
Remembering Sushma Ji on her first Punya Tithi. Her untimely and unfortunate demise left many saddened. She served India selflessly and was an articulate voice for India at the world stage.
Here is what I had spoken at a prayer meet in her memory. https://t.co/nHIXCw469P
— Narendra Modi (@narendramodi) August 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.