ಲಕ್ನೋ: ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ಆಗಸ್ಟ್ 5ರಂದು ನೆರವೇರಿದ ಭೂಮಿ ಪೂಜೆಯ ಪ್ರಥಮ ಪ್ರಸಾದವನ್ನು ದಲಿತ ಕುಟುಂಬಕ್ಕೆ ನೀಡಲಾಗಿದೆ.
ಮಹಾಬಿರ್ ಅವರ ಕುಟುಂಬಕ್ಕೆ ಪ್ರಸಾದವನ್ನು ನೀಡಲಾಗಿದೆ. ಅದರೊಂದಿಗೆ ಶ್ರೀ ರಾಮಚರಿತ ಮಾನಸ ಮತ್ತು ತುಳಸಿ ಮಾಲೆಯನ್ನು ಕೂಡ ಅವರಿಗೆ ನೀಡಲಾಗಿದೆ.
ಮಹಾಬಿರ್ ಕುಟುಂಬಕ್ಕೆ ಪ್ರಸಾದ ನೀಡಿದ ಬಳಿಕವೇ ಇತರರಿಗೆ ಪ್ರಸಾದ ವಿತರಣೆ ಕಾರ್ಯಕ್ರಮ ಅಯೋಧ್ಯೆಯಲ್ಲಿ ನೆರವೇರಿದೆ.
ಮಹಾಬಿರ್ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಯಾಗಿದ್ದು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅವರ ಮನೆಗೆ ತೆರಳಿ ಊಟವನ್ನು ಮಾಡಿದ್ದರು.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಅಡಿಗಲ್ಲು ಹಾಕಿದ್ದಾರೆ. ಈ ಸಂದರ್ಭದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮುಂತಾದವರು ಉಪಸ್ಥಿತರಿದ್ದರು.
ಇಡೀ ಅಯೋಧ್ಯೆಯ ಆವರಣವನ್ನು ಇವತ್ತು ಸಂಪೂರ್ಣ ಸ್ವಚ್ಛ ಮಾಡಲಾಗಿದ್ದು, ಮಂದಿರ ನಿರ್ಮಾಣದ ಕಾರ್ಯ ಶನಿವಾರದಿಂದ ಆರಂಭಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.