ನವದೆಹಲಿ: ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರು 6 ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ 2020ರ ಸಮಾರಂಭವನ್ನು ಇಂದು ಉದ್ಘಾಟಿಸಿದರು. ಕೈಮಗ್ಗ ಉದ್ಯಮವನ್ನು ಪ್ರಚಾರ ಮಾಡಲು ಅವರು ಮೊಬೈಲ್ ಅಪ್ಲಿಕೇಶನ್ ಮತ್ತು ಪೋರ್ಟಲ್ಗೆ ಕೂಡ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಇರಾನಿ, ನೇಕಾರರು ಮತ್ತು ಇತರ ಪಾಲುದಾರರನ್ನು ಡಿಜಿಟಲ್ ರೀತಿಯಲ್ಲಿ ಸಂಪರ್ಕಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಕೈಮಗ್ಗ ಪೋರ್ಟಲ್ ಮೂಲಕ ಜನರು ಜವಳಿ ಸಚಿವಾಲಯ ಪ್ರಾರಂಭಿಸಿದ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು ಎಂದು ಹೇಳಿದರು.
ಕೈಮಗ್ಗ ಉದ್ಯಮವು ಭಾರತದ ಅತ್ಯಂತ ಪ್ರಾಚೀನ ಉದ್ಯಮವಾಗಿದೆ ಮತ್ತು ದೇಶದ ಆರ್ಥಿಕತೆಯಲ್ಲಿ ಮೊದಲಿನಿಂದಲೂ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದರು.
ವರದಿಗಳ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ನಿರ್ಮಾಣವಾದ ಭಾರತದ ಮೊದಲ ಕೈಮಗ್ಗ ಕರಕುಶಲ ಗ್ರಾಮ ಶರನ್ಗೆ ಸಚಿವೆ ಪ್ರಾರಂಭ ನೀಡಿದರು. ಸ್ಥಳೀಯ ನೇಯ್ಗೆ ಉತ್ಪನ್ನಗಳನ್ನು ಉತ್ತೇಜಿಸಲು 10 ಕೈಮಗ್ಗ ಕರಕುಶಲ ಗ್ರಾಮಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ದೇಶದ ಕೈಮಗ್ಗ ನೇಕಾರರನ್ನು ಗೌರವಿಸಲು ಪ್ರತಿವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.