ನವದೆಹಲಿ: ಮೋದಿ ಅವರು ಪ್ರಧಾನಿಯಾಗಿ ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ಭಾರತ ಸ್ವಚ್ಛವಾಗುವತ್ತ ದಾಪುಗಾಲು ಹಾಕುತ್ತಿದೆ. ದೇಶವನ್ನು ಆರ್ಥಿಕ, ಸಾಮಾಜಿಕ ಸೇರಿದಂತೆ ಇನ್ನಿತರ ವಿಚಾರಗಳಲ್ಲಿಯೂ ಎತ್ತರಕ್ಕೆ ಕೊಂಡೊಯ್ಯುವತ್ತ ಚಿತ್ತ ನೆಟ್ಟಿರುವ ಪ್ರಧಾನಿ ಅವರು, ಸ್ವಚ್ಛ ಭಾರತ್ ಅಭಿಯಾನದ ಮೂಲಕ ಭಾರತೀಯರಲ್ಲಿನ ಸ್ವಚ್ಛತೆಯ ಅರಿವನ್ನು ಗಟ್ಟಿಗೊಳಿಸಿದ್ದಾರೆ. ಸದ್ಯ ಸ್ವಚ್ಛ ಭಾರತ ಮಿಷನ್ನ ಸಂವಾದ ಕೇಂದ್ರವಾದ ರಾಷ್ಟ್ರೀಯ ಸ್ವಚ್ಛತಾ ಕೇಂದ್ರಕ್ಕೆ ಪ್ರಧಾನಿ ಮೋದಿ ನಾಳೆ ಚಾಲನೆ ನೀಡಲಿದ್ದಾರೆ.
ರಾಜಘಾಟ್ ಸಮೀಪ ಸ್ಥಾಪನೆ ಮಾಡಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಮೋದಿ ನಾಳೆ ಉದ್ಘಾಟಿಸಲಿದ್ದು, ತದನಂತರ ರಾಷ್ಟ್ರ ರಾಜಧಾನಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂವಾದ ಕಾರ್ಯಕ್ರಮದಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 36 ವಿದ್ಯಾರ್ಥಿಗಳು ಭಾಗವಹಿಸಲಿರುವುದಾಗಿಯೂ ಮೂಲಗಳು ಮಾಹಿತಿ ನೀಡಿವೆ.
10 ಎಪ್ರಿಲ್ 2017 ರಂದು ಗಾಂಧೀಜಿ ಅವರ ಚಂಪಾರಣ್ ಸತ್ಯಾಗ್ರಹ ಶತಮಾನೋತ್ಸವ ಕಾರ್ಯಕ್ರಮದಲ್ಲಿ ದೇಶದಲ್ಲಿ ರಾಷ್ಟ್ರೀಯ ಸ್ವಚ್ಛತಾ ಕೇಂದ್ರನಿರ್ಮಾಣ ಮಾಡುವ ಕುರಿತಂತೆ ಮೋದಿ ಅವರು ಹೇಳಿಕೆ ನೀಡಿದ್ದರು. ಅದರಂತೆ ಇದೀಗ ಕೇಂದ್ರವನ್ನು ಸ್ಥಾಪಿಸಿ, 8 ಆಗಸ್ಟ್ 2020 ರಂದು ಕೇಂದ್ರಕ್ಕೆ ಅಧಿಕೃತ ಚಾಲನೆಯನ್ನು ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.