ಬೆಂಗಳೂರು: ಕೋಟ್ಯಂತರ ಭಾರತೀಯರ ಬಹುಕಾಲದ ಕನಸು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಇನ್ನೇನು ಕೆಲವೇ ಸಮಯದಲ್ಲಿ ಕೈಗೂಡಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ಭೂಮಿಪೂಜೆಯನ್ನೂ ನೆರವೇರಿಸಿದ್ದಾರೆ. ಈ ಸಂಬಂಧ ಸಂತಸ ವ್ಯಕ್ತಪಡಿಸಿರುವ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ ರಾಮ ಮಂದಿರ ನಿರ್ಮಾಣದ ಕುರಿತಂತೆ ಸಂತಸ ವ್ಯಕ್ತಪಡಿಸಿದ್ದು, ಜೊತೆಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಸಮೀಪ ಕರ್ನಾಟಕದ ಯಾತ್ರಿಕರ ಭವನ ನಿರ್ಮಾಣಕ್ಕೆ 2 ಎಕರೆಗಳಷ್ಟು ಸ್ಥಳವನ್ನು ನೀಡಬೇಕು ಎಂದು ಯೋಗಿ ಆದಿತ್ಯನಾಥ್ ಅವರಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಭಕ್ತರು ಶ್ರೀ ರಾಮನ ದರ್ಶನ ಪಡೆಯಲು ತೆರಳುವ ಸಂದರ್ಭದಲ್ಲಿ ಅವರಿಗೆ ಉಳಿದುಕೊಳ್ಳಲು ಪೂರಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಉತ್ತರ ಪ್ರದೇಶದ ಸರ್ಕಾರದ ಮುಂದೆ ತಮ್ಮ ಮನದಿಂಗಿತವನ್ನು ಪತ್ರದ ಮುಖೇನ ತಿಳಿಸಿದ್ದಾರೆ.
ರಾಮ ಮತ್ತು ಕರ್ನಾಟಕಕ್ಕೆ ಸಂಬಂಧವಿದ್ದು, ರಾಮನ ಪ್ರಿಯ ಭಕ್ತ ಹನುಮ ಜನಿಸಿದ ಅಂಜನಾದ್ರಿ ಪರ್ವತ ರಾಜ್ಯದ ಹಂಪಿಯ ಸಮೀಪದಲ್ಲಿದೆ. ಈ ಹಿನ್ನೆಲೆಯಲ್ಲಿಯೂ ರಾಜ್ಯದ ಹೆಚ್ಚಿನ ಭಕ್ತರು ಅಯೋಧ್ಯೆಯನ್ನು ಸಂದರ್ಶಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಯೋಗಿ ಸರ್ಕಾರಕ್ಕೆ ಈ ಮನವಿಯನ್ನು ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.