ನವದೆಹಲಿ: ಜನರು ಹೆಚ್ಚಾಗಿ ಸಂಪರ್ಕಿಸುವ ಕಿರಾಣಿ ಅಂಗಡಿ, ತರಕಾರಿ ಸೇರಿದಂತೆ ಇನ್ನಿತರ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಂಡಿರುವವರನ್ನು ಕೊರೋನಾ ತಪಾಸಣೆಗೆ ಒಳಪಡಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.
ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಿಗೆ ಪತ್ರ ಬರೆದಿರುವ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣ ದೇಶದ ಆದ್ಯತೆಯಾಗಿದ್ದು, ಆರಂಭದ ಹಂತದಲ್ಲಿಯೇ ಕೊರೋನಾ ಪತ್ತೆಹಚ್ಚುವ ಕೆಲಸವನ್ನು ಮಾಡಬೇಕಿದೆ. ಆದ್ದರಿಂದ ಜನರು ಹೆಚ್ಚಾಗಿ ಸಂಪರ್ಕಿಸುವ ವ್ಯಾಪಾರಿಗಳಿಗೆ ಕೊರೋನಾ ಪರೀಕ್ಷೆ ನಡೆಸುವಂತೆಯೂ ಸೂಚಿಸಿದ್ದಾರೆ. ಯಾರಲ್ಲಾದರೂ ಸೋಂಕು ದೃಢಪಟ್ಟ ತಕ್ಷಣವೇ ಅವರಿಗೆ ಪೂರಕ ಚಿಕಿತ್ಸೆ ನೀಡುವ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನು ಶೀಘ್ರ ಪತ್ತೆ ಹಚ್ಚುವ ಕೆಲಸವಾಗಬೇಕು. ಹೀಗಾದಲ್ಲಿ ಮಾತ್ರ ಕೊರೋನಾ ಮರಣ ಪ್ರಮಾಣ ತಗ್ಗಿಸಬಹುದೆಂದು ಈ ಪತ್ರದಲ್ಲಿ ತಿಳಿಸಲಾಗಿದೆ. ಕೊರೋನಾ ವೇಗವಾಗಿ ಹರಡುತ್ತಿರುವ ಪ್ರದೇಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದೆ.
ಅಗತ್ಯ ಬಿದ್ದಾಗ ಆಮ್ಲಜನಕ ವ್ಯವಸ್ಥೆ ಹೊಂದಿರುವ ಆಂಬುಲೆನ್ಸ್, ಕ್ವಾರಂಟೈನ್, ಐಸೋಲೇಷನ್, ಚಿಕಿತ್ಸೆ, ಹಾಸಿಗೆಗಳ ಲಭ್ಯತೆ, ಮನೆಮನೆ ಭೇಟಿ ಮೊದಲಾದ ಕೆಲಸಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪತ್ರದ ಮೂಲಕ ನಿರ್ದೇಶನ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.