ನವದೆಹಲಿ: ಕೊರೋನಾ ನಿರ್ವಹಣೆ, ಚಿಕಿತ್ಸೆ, ನಿಯಂತ್ರಣ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಯೋಚಿತ ಕಾರ್ಯ ನಿರ್ವಹಣೆಯಿಂದಾಗಿ ದೇಶದಲ್ಲಿ ಸೋಂಕಿತರ ಚೇತರಿಕೆಯ ಪ್ರಮಾಣ ಹೆಚ್ಚಾಗಿದ್ದು 68.32% ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸಾವಿನ ಪ್ರಮಾಣ 2.04% ರಷ್ಟು ಕುಸಿದಿರುವುದಾಗಿಯೂ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಕೊರೋನಾ ಸಂಬಂಧಿಸಿದಂತೆ ಜಾಗತಿಕವಾಗಿ ಹೋಲಿಸಿದರೆ ಇತರೆಲ್ಲಾ ದೇಶಗಳಿಗಿಂತ ಭಾರತವೇ ಕಡಿಮೆ ಪ್ರಮಾಣದಲ್ಲಿ ಸೋಂಕಿತರನ್ನು ಹೊಂದಿರುವುದಾಗಿಯೂ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 48,900 ರಷ್ಟು ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟು 14,27,005 ರಷ್ಟು ಮಂದಿ ಚೇತರಿಸಿಕೊಂಡಂತಾಗಿದ್ದು, ಚೇತರಿಕೆಯ ಪ್ರಮಾಣ 68.32% ಕ್ಕೆ ಏರಿಕೆಯಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ದೇಶದಲ್ಲಿ 6, 19,088 ರಷ್ಟು ಸಕ್ರಿಯ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿವೆ. ಕಳೆದ ಶುಕ್ರವಾರ ಒಟ್ಟು 5,98,778 ಜನರಿಗೆ ದೇಶದಲ್ಲಿ ಕೊರೋನಾ ಟೆಸ್ಟ್ ನಡೆಸಲಾಗಿದೆ. ಈ ವರೆಗೆ ದೇಶದಲ್ಲಿ ಒಟ್ಟು 2,33,87,171 ಜನರಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಆ ಮೂಲಕ ಪ್ರತಿ ಮಿಲಿಯನ್ಗೆ 16,947 ಜನರಿಗೆ ಕೊರೋನಾ ಟೆಸ್ಟ್ ನಡೆಸಲಾಗುತ್ತಿದೆ.
ದೇಶದಲ್ಲಿ ಈ ವರೆಗೆ 20, 88,661 ರಷ್ಟು ಸೋಂಕಿತ ಪ್ರಕರಣಗಳು ದಾಖಲಾಗಿದ್ದು, 42,518 ರಷ್ಟು ಸೋಂಕಿತರು ಮೃತಪಟ್ಟಿದ್ದಾರೆ ಎಂದೂ ಸಚಿವಾಲಯ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ.
ಇನ್ನು ದೇಶದ ಪ್ರತಿಷ್ಠಿತ ವ್ಯಕ್ತಿಗಳಿಗೂ ಕೊರೋನಾ ಆವರಿಸಿದ್ದು, ಗೃಹಸಚಿವ ಅಮಿತ್ ಶಾ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲಾದವರೂ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.