ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಂದಿನಿಂದ ಒಂದು ವಾರಗಳ ಕಾಲ ಸ್ವಚ್ಛತಾ ಸಪ್ತಾಹವನ್ನು ಆಚರಿಸಲಿದೆ. ವಾರ ಪೂರ್ತಿ, ವಿಶೇಷ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಲಾಗುವುದು ಮತ್ತು ರೈಲ್ವೆ ಆವರಣದ ಸಮೀಪವಿರುವ ಹಳಿಗಳು, ನಿಲ್ದಾಣ ಕಚೇರಿಗಳು, ಕಾಲೋನಿಗಳು, ಕೆಲಸದ ಸ್ಥಳಗಳು, ನಿಲ್ದಾಣಗಳು ಮತ್ತು ಇತರ ಪ್ರದೇಶಗಳನ್ನು ಸ್ವಚ್ಚಗೊಳಿಸಲು ವಿಶೇಷ ಗಮನ ನೀಡಲಾಗುವುದು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ವರದಿಗಳ ಪ್ರಕಾರ, ಹಳಿಗಳ ಸ್ವಚ್ಛತೆಯ ಬಗ್ಗೆ ಗಮನಹರಿಸಲಾಗುವುದು ಮತ್ತು ಇತರ ತ್ಯಾಜ್ಯಗಳ ಜೊತೆಗೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಕ್ಕೆ ವಿಶೇಷ ಗಮನ ನೀಡಲಾಗುವುದು ಎಂದು ಅದು ಹೇಳಿದೆ.
ಪ್ರಸ್ತುತ ದೇಶದಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕ ರೈಲುಗಳು ಹಳಿಗಳಲ್ಲಿ ಚಲಿಸುತ್ತಿರುವುದರಿಂದ, ಹಳಿಗಳನ್ನು ಸ್ವಚ್ಚಗೊಳಿಸಲು ಹೆಚ್ಚಿನ ಅವಕಾಶ ಸಿಗಲಿದೆ ಮತ್ತು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುತ್ತದೆ ಎಂದಿದೆ.
ನಿಲ್ದಾಣಗಳು, ರೈಲುಗಳು, ನೀರು ಮಾರಾಟ ಮಾಡುವ ಸ್ಥಳಗಳು, ಶೌಚಾಲಯಗಳು ಮತ್ತು ಚರಂಡಿಗಳ ಸಂಪೂರ್ಣ ಸ್ವಚ್ಛತೆಯತ್ತ ಗಮನ ಹರಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಈ ಅವಧಿಯಲ್ಲಿ, ಜಾಗೃತಿ ಅಭಿಯಾನಗಳನ್ನು ಸಹ ಪ್ರಾರಂಭಿಸಲಾಗುವುದು ಮತ್ತು ರೈಲುಗಳು, ನಿಲ್ದಾಣಗಳು ಮತ್ತು ಹಳಿಗಳನ್ನು ಸ್ವಚ್ಚವಾಗಿಡಲು ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರನ್ನು ಒತ್ತಾಯಿಸಲಾಗುವುದು ಎಂದು ರೈಲ್ವೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.