ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಘಟಕವು ಆಗಸ್ಟ್ ಮೊದಲಾರ್ಧವನ್ನು ಸ್ವರಾಜ್ ಪಖ್ವಾಡ ಎಂದು ಆಚರಿಸುತ್ತಿದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ವಸಾಹತುಶಾಹಿ ಆಡಳಿತವನ್ನು ಪ್ರಶ್ನಿಸಿ ಸೆಡಿದೆದ್ದಿದ್ದ ಮತ್ತು ಈಗ ಮರೆತು ಹೋಗಿರುವ ಹೋರಾಟಗಾರರನ್ನು ಸ್ಮರಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಈ ಸರಣಿಯಲ್ಲಿ, ಎಬಿವಿಪಿ ಪ್ರತಿದಿನ ಸ್ವಾತಂತ್ರ್ಯ ಲೇಖಕರ ಲೇಖನವನ್ನು ಪ್ರಕಟಿಸುತ್ತಿದೆ. ಭಾರತದ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಗೌರವಾನ್ವಿತ ಸ್ಥಾನವನ್ನು ಕಂಡುಕೊಳ್ಳದ, ವಿಶೇಷವಾಗಿ ಹಿಂದುಳಿದ ವರ್ಗದಿಂದ ಬಂದ ಅಥವಾ ಬುಡಕಟ್ಟು ಪ್ರದೇಶಗಳಿಂದ ಬಂದ ಹೋರಾಟಗಾರರನ್ನು ಪರಿಚಯಿಸುವ ಕಾರ್ಯವನ್ನು ಇದು ಮಾಡಲಿದೆ.
ಈ ಸರಣಿಯಲ್ಲಿ, ಎಬಿವಿಪಿ ಆಗಸ್ಟ್ 9 ರ ಭಾನುವಾರ, ಬುಡಕಟ್ಟು ಮುಖಂಡರಾದ ವೀರ್ ಗುಂಡಾಧುರ್ ಅವರ ಬಗ್ಗೆ ಒಂದು ಲೇಖನವನ್ನು ಪ್ರಕಟಿಸಿದೆ. ಇವರು 1910 ರಲ್ಲಿ ಬಸ್ತಾರ್ನ ಬುಡಕಟ್ಟು ಜನಾಂಗದವರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕುವಂತೆ ಮಾಡಲು ಕಾರಣರಾದರು. ಈ ದಿನವನ್ನು ಅಂತರರಾಷ್ಟ್ರೀಯ ಬುಡಕಟ್ಟು ದಿನವೆಂದು ಗುರುತಿಸಲಾಗಿದೆ.
ಆಗಸ್ಟ್ 1 ರಂದು ಪ್ರಾರಂಭವಾದ ಕಾರ್ಯಕ್ರಮವು ಆಗಸ್ಟ್ 15 ರಂದು ಮುಕ್ತಾಯಗೊಳ್ಳಲಿದೆ ಎಂದು ಎಬಿವಿಪಿ ಹೇಳಿದೆ, ಮರೆತೇ ಹೋಗಿರುವ ಮತ್ತು ಬುಡಕಟ್ಟು ಸಮುದಾಯಕ್ಕೆ ಸೇರಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳ ಬಗ್ಗೆ ಬೆಳಕು ಚೆಲ್ಲುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.