ಧಾರವಾಡ: ಹೆತ್ತಮ್ಮನ ಆರೋಗ್ಯ ಸುಧಾರಿಸುವಂತೆ ಪ್ರಾರ್ಥಿಸಿ ಗ್ರಾಮದ ದೇವರಿಗೆ ಪೂಜೆ ಸಲ್ಲಿಸಲು ತೆರಳಿದ್ದ 8 ನೇ ತರಗತಿಯ ಬಾಲಕಿಯ ಮೇಲೆ, ಪರಿಚಯದವನೇ ಆಗಿದ್ದ ಕಾಮುಕ ಬಶೀರ್ ಎಂಬಾತ ಅತ್ಯಾಚಾರ ಎಸಗಿದ್ದ. ಈ ಘಟನೆಯಿಂದಾಗಿ ಮಾನಸಿಕವಾಗಿ ನೊಂದು ಹೋಗಿದ್ದ ಬಾಲಕಿ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿ , ವಿಷ ಕುಡಿದಿದ್ದಳು. ಆ ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಳು.
ಈ ಘಟನೆಯ ಬಳಿಕ ಆರೋಪಿ ಬಶೀರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಾಂತ್ವನ ಹೇಳಿ, ನ್ಯಾಯ ಒದಗಿಸುವ ಭರವಸೆಯನ್ನೂ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಣ್ಣೀರು ಸುರಿಸಿರುವ ಹೆತ್ತವರು, ಈ ವಿಚಾರದಿಂದ ಮಗಳು ಸಾಕಷ್ಟು ನೊಂದಿದ್ದಳು. ಆರೋಪಿಗೆ ತಕ್ಕ ಪಾಠ ಕಲಿಸೋಣ ಎಂದು ಧೈರ್ಯ ತುಂಬುವ ಪ್ರಯತ್ನ ಮಾಡಿದ್ದರೂ, ಮಗಳು ಕೀಟ ನಾಶಕ ಸೇವಿಸಿದ್ದಾಳೆ. ಆಸ್ಪತ್ರೆಯಲ್ಲಿಯೂ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ. ಆಕೆಯ ಸಾವಿಗೆ ನ್ಯಾಯ ದೊರಕಬೇಕಾದರೆ ಆರೋಪಿ ಕಾಮುಕ ಬಶೀರನಿಗೆ ಗಲ್ಲುಶಿಕ್ಷೆಯಾಗಬೇಕು ಎಂದು ಹೆತ್ತವರು ಸಚಿವರಲ್ಲಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಜೋಷಿ, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಗೆ ಕಠಿಣ ಶಿಕ್ಷೆಯೂ ಆಗಲಿದ್ದು, ಬಾಲಕಿಯ ಕುಟುಂಬ ವರ್ಗಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಭದ್ರತೆ ನೀಡಲಾಗುತ್ತದೆ. ಏನೇ ಸಮಸ್ಯೆಗಳು ಎದುರಾದರೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದ್ದಾರೆ. ಜೊತೆಗೆ ವೈಯಕ್ತಿಕವಾಗಿ ಮತ್ತು ಶಾಸಕ ಅಮೃತ ದೇಸಾಯಿ ಸೇರಿ ಶೀಘ್ರವೇ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ.
ಕಾಮುಕನ ವಿರುದ್ಧ ಭುಗಿಲೆದ್ದ ಆಕ್ರೋಶ: ಕಠಿಣ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲೂ ಅಭಿಯಾನ
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಡಿದೆದ್ದಿರುವ ಕರ್ನಾಟಕ, ಆರೋಪಿ ಬಶೀರನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದೆ. ಇಡೀ ಧಾರಾವಾಡ ಸೇರಿದಂತೆ ಕರ್ನಾಟಕದ ಇತರ ಜನರೂ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವಂತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಯಾನ ಆರಂಭಿಸಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ, ಗಲ್ಲು ಶಿಕ್ಷೆ ನೀಡಬೇಕೆಂಬ ಕೂಗು ಕೇಳಿ ಬರಲಾರಂಭಿಸಿದೆ.
ಅತ್ಯಾಚಾರಿ ಕಾಮುಕನಿಗೆ ಉಗ್ರ ಶಿಕ್ಷೆಯಾಗುವ ವರೆಗೂ ಈ ಹೋರಾಟ ಮುಂದುವರಿಯುವುದಾಗಿಯೂ ನೆಟ್ಟಿಗರು ಸರ್ಕಾರಕ್ಕೆ, ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕವೇ ತಿಳಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.