ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಪ್ರಲ್ಹಾದ್ ಜೋಶಿ ಅವರು ಆ.9ರಂದು ಉದ್ಘಾಟಿಸಿದರು.
ನೈರುತ್ಯ ರೈಲ್ವೆಯ ವತಿಯಿಂದ ಆಯೋಜಿಸಲಾಗಿದ್ದ ವರ್ಚುವಲ್ ಸಮಾರಂಭದ ಮೂಲಕ ಸಚಿವರುಗಳು ಈ ಮ್ಯೂಸಿಯಂ ಅನ್ನು ಲೋಕಾರ್ಪಣೆ ಮಾಡಿ, ಈ ಮ್ಯೂಸಿಯಂ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಲಿದೆ. ಜೊತೆಗೆ ನಗರವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿಯೂ ಈ ಮ್ಯೂಸಿಯಂ ಮಹತ್ವ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿ- ಬೆಂಗಳೂರು-ಬೆಳಗಾವಿ ನಡುವೆ ಇಲೆಕ್ಟ್ರಿಕ್ ರೈಲು ಸಂಪರ್ಕ ಕಲ್ಪಿಸುವಂತೆಯೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಇದರಿಂದ ಜನರಿಗೆ ಅನುಕೂಲವಾಗಲಿದ್ದು, ಕಡಿಮೆ ಅವಧಿಯಲ್ಲಿ ಜನರು ನಿರೀಕ್ಷಿತ ಪ್ರದೇಶ ತಲುಪಲು ಅನುಕೂಲವಾಗಲಿದೆ ಎಂದೂ ಹೇಳಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಫ್ಲ್ಯಾಟ್ ಫಾರ್ಮ್ 1400 ಮೀಟರ್ ಉದ್ದವಿದ್ದು, ನಗರಕ್ಕೆ ಹಿರಿಮೆ ತಂದುಕೊಟ್ಟಿದೆ. ಅದರ ನಿರ್ಮಾಣಕ್ಕೆ ಸಹಕರಿಸಿದ ಗೋಯಲ್ ಮತ್ತು ಸುರೇಶ್ ಅಂಗಡಿ ಅವರಿಗೂ ಜೋಶಿ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್, ಕೊರೋನಾ ಸಂದರ್ಭದಲ್ಲಿ ರೈಲ್ವೆ ಇಲಾಖೆ ಮಹತ್ವದ ಸೇವೆಗಳನ್ನು ದೇಶಕ್ಕೆ ನೀಡಿದೆ. ದೇಶ ಸೇವೆಯ ವಿಚಾರ ಬಂದಾಗ ರೈಲ್ವೆ ಇಲಾಖೆ ಯಾವುದೇ ಕಾರ್ಯ ಮಾಡಲೂ ಸಿದ್ಧವಿದೆ. ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಇಂಜಿನ್ ನಂತೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಆತ್ಮನಿರ್ಭರ ಭಾರತದ ವಿಚಾರದಲ್ಲಿಯೂ ರೈಲ್ವೆ ಇಲಾಖೆ ದೇಶದ ಜೊತೆಗೆ ಕೈಜೋಡಿಸಲಿರುವುದಾಗಿ ಅವರು ಹೇಳಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, 167 ವರ್ಷಗಳಲ್ಲಿ ರೈಲ್ವೆ ಇಲಾಖೆ ಬೆಳೆದುಬಂದ ಹಾದಿಯ ಬಗ್ಗೆ ಈ ಮ್ಯೂಸಿಯಂ ಮಾಹಿತಿ ನೀಡಲಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿಗೆ ಐತಿಹಾಸಿಕ ಮನ್ನಣೆ ಇದ್ದು ಇಲ್ಲಿ ಮ್ಯೂಸಿಯಂ ಸ್ಥಾಪಿಸಿರುವುದು ನಗರವನ್ನು ಮತ್ತಷ್ಟು ಎತ್ತರಕ್ಕೇರಿಸಲಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.