ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಪರೀಕ್ಷೆ ಬರೆದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದ್ದು 71.80% ರಷ್ಟು ಫಲಿತಾಂಶ ಬಂದಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಳೆದ ಬಾರಿ 73.70% ಫಲಿತಾಂಶವಿದ್ದು, ಈ ಬಾರಿ ಪ್ರಮಾಣ ಕುಸಿತವಾಗಿದೆ.
ಜಿಲ್ಲಾವಾರು ಫಲಿತಾಂಶ ಗಮನಿಸುವುದಾದರೆ ಚಿಕ್ಕಬಳ್ಳಾಪುರ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ಎರಡನೇಯ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ, ಮೂರನೇಯ ಸ್ಥಾನದಲ್ಲಿ ಮಧುಗಿರಿ ಇದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 5,82,316 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 76.56% ಬಾಲಕಿಯರಾಗಿದ್ದರೆ, 66.10% ರಷ್ಟು ಬಾಲಕರು ಪರೀಕ್ಷೆ ಬರೆದಿದ್ದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ. 6 ಮಂದಿ ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ಸ್ಗಳಾಗಿದ್ದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
501 ಸರ್ಕಾರಿ ಶಾಲೆಗಳು 100% ರಷ್ಟು ಫಲಿತಾಂಶ ಪಡೆದಿದ್ದರೆ, ಅನುದಾನಿತ ಶಾಲೆಗಳ ಪೈಕಿ 139 ಶಾಲೆಗಳು 100% ಫಲಿತಾಂಶ ಗಳಿಸಿಕೊಂಡಿವೆ. 10 ಜಿಲ್ಲೆಗಳಿಗೆ ಎ ಗ್ರೇಡ್ ದೊರೆತಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಫಲಿತಾಂಶಗಳನ್ನು ವಿದ್ಯಾರ್ಥಿಗಳ ಮೊಬೈಲ್ಗೂ ಕಳುಹಿಸಲಾಗುತ್ತದೆ. ಜೊತೆಗೆ ನಾಳೆ ಶಾಲೆಗಳಲ್ಲಿಯೂ ಪ್ರಕಟಿಸಲಾಗುವುದಾಗಿ ಅವರು ತಿಳಿಸಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ 0.6% ದಷ್ಟು ಕಡಿಮೆ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2,28,734 ಮಂದಿ ಫೇಲ್ ಆಗಿದ್ದಾರೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಮೌಲ್ಯಮಾಪನವನ್ನು ನಡೆಸಲಾಗಿತ್ತು ಎಂದೂ ಸಚಿವರು ತಿಳಿಸಿದ್ದಾರೆ. ಮರುಪರೀಕ್ಷಾ ದಿನಾಂಕವನ್ನು ಮುಂದಿನ 2-3 ದಿನಗಳಲ್ಲಿಯೇ ತಿಳಿಸಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.