ನವದೆಹಲಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಅಧಿಕಾರದಲ್ಲಿ ಮೂರು ವರ್ಷಗಳನ್ನು ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ನವದೆಹಲಿಯಲ್ಲಿ ‘ಕನೆಕ್ಟಿಂಗ್, ಕಮ್ಯೂನಿಕೆಟಿಂಗ್, ಚೇಜಿಂಗ್’ ಎಂಬ ಪುಸ್ತಕವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಿದರು.
ವರದಿಗಳ ಪ್ರಕಾರ, ಈ ಪುಸ್ತಕವು ನಾಯ್ಡು ಅವರು ಭಾರತದ ಉಪ ರಾಷ್ಟ್ರಪತಿಯಾಗಿ ಮೂರು ವರ್ಷಗಳ ಹಿನ್ನೆಲೆಯಲ್ಲಿ ಬಿಡುಗಡೆಗೊಂಡಿದೆ. ಉಪರಾಷ್ಟ್ರತಿಯವರ ಭಾಷಣದ ಸರಣಿಯನ್ನು ಈ ಪುಸ್ತಕವು ಒಳಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ನಾಯ್ಡು, ರಾಜ್ಯಸಭೆಯ ಉಪಾಧ್ಯಕ್ಷ ಮತ್ತು ಉಪ ರಾಷ್ಟ್ರಪತಿಯಾಗಿ ತನ್ನ ಪ್ರಯತ್ನಗಳು ಮತ್ತು ಫಲಿತಾಂಶಗಳ ಕುರಿತು ಸರಣಿಯ 3 ನೇ ಪ್ರಕಟಣೆಯ ಬಿಡುಗಡೆ ಇದಾಗಿದೆ ಎಂದರು. ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲು ತಾನು ತಿಂಗಳಿಗೆ ಸುಮಾರು 20 ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದೆ ಎಂದಿದ್ದಾರೆ.
ಆಗಸ್ಟ್ 2019 ರಿಂದ 70 ಕ್ಕೂ ಹೆಚ್ಚು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅವರು ಮಾತನಾಡಿದ್ದಾರೆ ಮತ್ತು 14 ಸಮ್ಮೇಳನಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಉಪರಾಷ್ಟ್ರಪತಿ ಈ ವರ್ಷದ ಮಾರ್ಚ್ನಿಂದ ಯಾವುದೇ ಪ್ರಯಾಣ ಮತ್ತು ನೇರ ಭಾಗವಹಿಸುವ ಸಭೆಗಳಿಗೆ ಹಾಜರಾಗಿಲ್ಲ. ಆದರೆ ತಂತ್ರಜ್ಞಾನ ಬಳಸಿ ವರ್ಚುವಲ್ ಅಗಿ ಸಭೆಗಳಿಗೆ ಹಾಜರಾಗಿದ್ದಾರೆ.
ರೈತರು, ವಿದ್ಯಾರ್ಥಿಗಳು, ಯುವಕರು, ವಿಜ್ಞಾನಿಗಳು ಸೇರಿದಂತೆ ಯುವಕರನ್ನು ಉದ್ದೇಶಿಸಿ ಅವರು ಆಡಿದ ಮಾತುಗಳ ಸರಣಿ ಈ ಪುಸ್ತಕದಲ್ಲಿ ಇದೆ. ಅವರ ಅನುಭವಗಳು, ವಿಶ್ವ ದೃಷ್ಟಿಕೋನ ತಿಳಿಸುವುದರ ಜೊತೆಗೆ ಹೊಸ ಭಾರತವನ್ನು ನಿರ್ಮಿಸುವ ಮುಂದಿನ ಮಾರ್ಗವನ್ನು ಅವರು ಮಾತುಗಳ ಮೂಲಕ ಹಂಚಿಕೊಂಡಿದ್ದಾರೆ.
ಈ ಪುಸ್ತಕದಿಂದ ವಿದ್ಯಾರ್ಥಿಗಳು ಸಾಕಷ್ಟು ಪ್ರಯೋಜನ ಪಡೆಯಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಒಂದು ತಲೆಮಾರಿನವರು ಮತ್ತೊಂದು ಪೀಳಿಗೆಗೆ ನೀಡುವ ಬಹುದೊಡ್ಡ ಕೊಡುಗೆ ಒಳ್ಳೆಯ ಪುಸ್ತಕ ಎಂದು ಅವರು ಅಭಿಪ್ರಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.