ನವದೆಹಲಿ: ಸುಳ್ಳು ಆರೋಪ ಮತ್ತು ಬಂಧನಕ್ಕೊಳಗಾಗಿ ನರಯಾತಕೆ ಅನುಭವಿಸಿದ್ದ ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರಿಗೆ ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಕೇರಳದ ಪಿನರಾಯ್ ವಿಜಯನ್ ಸರ್ಕಾರ ಕೊನೆಗೆ 1.3 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ನೀಡಿದೆ ಎಂದು ವರದಿಗಳು ತಿಳಿಸಿವೆ.
ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಎಡ ಸರ್ಕಾರಕ್ಕೆ 10 ಲಕ್ಷ ರೂಪಾಯಿಗಳನ್ನು ಅವರಿಗೆ ನೀಡುವಂತೆ ಆದೇಶಿಸಿದ ನಂತರ ಕೇರಳ ರಾಜ್ಯ ಸರ್ಕಾರವು 60 ಲಕ್ಷ ರೂ.ಗಳನ್ನು ನಂಬಿ ನಾರಾಯಣನ್ ಅವರಿಗೆ ಈ ಹಿಂದೆ ಹಸ್ತಾಂತರಿಸಿತ್ತು. ಇದೀಗ ಸಂಪೂರ್ಣ ಮೊತ್ತವನ್ನು ಪಾವತಿ ಮಾಡಿದೆ.
ಸ್ಥಳೀಯ ಮಾಧ್ಯಮ ವರದಿಯ ಪ್ರಕಾರ, ಪರಿಹಾರವನ್ನು ಹಸ್ತಾಂತರಿಸಲು ಮತ್ತು ಪ್ರಕರಣವನ್ನು ಇತ್ಯರ್ಥಗೊಳಿಸಲು ಕ್ಯಾಬಿನೆಟ್ ತಾತ್ವಿಕವಾಗಿ ಅನುಮೋದನೆ ನೀಡಿತು. ನಂಬಿ ಅವರನ್ನು 2019 ರ ಡಿಸೆಂಬರ್ನಲ್ಲಿ ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಅವರ ಮೇಲೆ 1994 ರಲ್ಲಿ ಇಬ್ಬರು ಮಾಲ್ಡೀವಿಯನ್ ಗುಪ್ತಚರ ಅಧಿಕಾರಿಗಳಿಗೆ ಪ್ರಮುಖ ರಕ್ಷಣಾ ರಹಸ್ಯಗಳನ್ನು ಸೋರಿಕೆ ಮಾಡಿದ ಆರೋಪ ಹೊರಿಸಲಾಗಿತ್ತು.
ಮೋದಿ ಸರ್ಕಾರ ಅವರಿಗೆ ಪದ್ಮಭೂಷಣ ನೀಡಿ ಪುರಸ್ಕರಿಸಿದೆ.
ಮಾಜಿ ಇಸ್ರೋ ವಿಜ್ಞಾನಿ 50 ದಿನಗಳ ಕಸ್ಟಡಿಯಲ್ಲಿ ಹಿಂಸೆಗೆ ಒಳಗಾಗಿದ್ದರು ಮತ್ತು ಸುಳ್ಳು ಹೇಳಿಕೆ ನೀಡುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಸಿಬಿಐ ಅವರ ವಿರುದ್ಧದ ಆರೋಪಗಳು ಸುಳ್ಳು ಎಂದು ತೀರ್ಮಾನಿಸುವುದಕ್ಕೂ ಮೊದಲು ಅವರು ಸುಮಾರು ಎರಡು ತಿಂಗಳು ಜೈಲಿನಲ್ಲಿ ಕಳೆಯಬೇಕಾಯಿತು.
ನಂಬಿ ಅವರನ್ನು ನಡೆಸಿಕೊಂಡ ರೀತಿಗೆ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛಿಮಾರಿ ಹಾಕಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.