ಆಗ್ರಾ: ಕೊರೋನಾ ಸಂಕಷ್ಟದ ಸಂದರ್ಭದಲ್ಲೇ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯೂ ಬಂದಿದ್ದು, ಕೃಷ್ಣನ ಜನ್ಮಸ್ಥಾನ ಮಥುರೆಯಲ್ಲಿಯೂ ಜನ್ಮಾಷ್ಟಮಿ ಆಚರಣೆ ನಡೆಯಿತು. ಈ ಬಾರಿಯ ಕೊರೋನಾದಿಂದಾಗಿ ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶ ನಿಷೇಧಿಸಿದ್ದು, ಲೈವ್ ಟೆಲಿಕಾಸ್ಟ್ ಮೂಲಕ ಮಥುರೆಯ ಕೃಷ್ಣಾಲಯದ ಜನ್ಮದಿನದ ಸಂಭ್ರಮವನ್ನು ಮನೆ ಮನೆಗೆ ತಲುಪಿಸುವ ಪ್ರಯತ್ನವನ್ನು ದೇವಾಲಯದ ಆಡಳಿತ ವರ್ಗ ಮಾಡಿತ್ತು.
ಶ್ರೀರಾಮ ಜನ್ಮಭೂಮಿಯ ತೀರ್ಥ ಕ್ಷೇತ್ರ ಟ್ರಸ್ಟ್ನ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಅವರು ಶ್ರೀ ಕೃಷ್ಣನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಸ್ಥಾನದ ಕಾರ್ಯದರ್ಶಿ ಕಪಿಲ್ ಶರ್ಮಾ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಳಗ್ಗೆ 11 ರಿಂದ ತೊಡಗಿದಂತೆ ಮಧ್ಯಾಹ್ನ 1 ರ ವರೆಗೆ ದೇವಾಲಯದ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗಿರುವುದಾಗಿಯೂ ಅವರು ತಿಳಿಸಿದ್ದಾರೆ.
ದೂರದರ್ಶನ ಮತ್ತು ಇತರ ವಾಹಿನಿಗಳಲ್ಲಿಯೂ ಈ ಸಮಾರಂಭವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೊರೋನಾ ಕಾರಣದಿಂದಾಗಿ ಭಕ್ತರಿಗೆ ದೇವಾಲಯ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದ್ದ ಹಿನ್ನೆಲೆಯಲ್ಲಿ ಈ ಎಲ್ಲಾ ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದೂ ಅವರು ತಿಳಿಸಿದ್ದಾರೆ.
ಇನ್ನು ಕೃಷ್ಣನ ಜನ್ಮಸ್ಥಾನ ಮಥುರಾ ಮತ್ತು ವೃಂದಾವನವನ್ನು ಈ ಸಂದರ್ಭದಲ್ಲಿ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸರ್ವಗ್ಯ ರಾಮ ಮಿಶ್ರ ಅವರು ತಿಳಿಸಿದ್ದಾರೆ. ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಎಲ್ಲಾ ಸಂಪ್ರದಾಯ, ಪ್ರಕ್ರಿಯೆಗಳನ್ನು ಕೈಗೊಳ್ಳುವ ಮೂಲಕ ಜನ್ಮಷ್ಟಮಿ ಆಚರಿಸಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.