ನವದೆಹಲಿ: ʼಪಿಎಂ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ)ʼ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ 5 ಲಕ್ಷಗಳನ್ನು ದಾಟಿದೆ. ಯೋಜನೆಯಡಿ ಮಂಜೂರಾದ ಸಾಲಗಳ ಸಂಖ್ಯೆ 1 ಲಕ್ಷ ದಾಟಿದೆ. ಯೋಜನೆಯಡಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ 41 ದಿನಗಳಲ್ಲಿ ಈ ಬೆಳವಣಿಗೆ ನಡೆದಿರುವುದು ವಿಶೇಷ.
ವರದಿಗಳ ಪ್ರಕಾರ, ಕೋವಿಡ್-19 ಲಾಕ್ಡೌನ್ ನಂತರ ತಮ್ಮ ವ್ಯವಹಾರಗಳನ್ನು ಪುನಃ ಪ್ರಾರಂಭಿಸಲು ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆಟುಕುವ ದರದಲ್ಲಿ ಕಾರ್ಯನಿರತ ಬಂಡವಾಳದ ಸಾಲವನ್ನು ನೀಡುವ ಸಲುವಾಗಿ ಪಿಎಂ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಇದಕ್ಕೆ ಅಭೂತಪೂರ್ವವಾದ ಸ್ಪಂದನೆ ಸಿಕ್ಕಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಈ ಯೋಜನೆಯನ್ನು ‘ಆತ್ಮನಿರ್ಭರ ಭಾರತ ಅಭಿಯಾನ’ ವ್ಯಾಪ್ತಿಯಲ್ಲಿ ಪ್ರಾರಂಭಿಸಿತು. ಸುಮಾರು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಒಂದು ವರ್ಷದ ಅವಧಿಯಲ್ಲಿ ತಲಾ 10 ಸಾವಿರ ರೂಪಾಯಿಗಳವರೆಗೆ ಮೇಲಾಧಾರ ಮುಕ್ತ ಕಾರ್ಯಕಾರಿ ಬಂಡವಾಳ ಸಾಲವನ್ನು ಒದಗಿಸಲು ಇದು ಉದ್ದೇಶಿಸಿದೆ.
ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಮತ್ತು ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಶನ್ಗಳನ್ನು (ಎಂಎಫ್ಐ) ಸಾಲ ನೀಡುವ ಸಂಸ್ಥೆಗಳಾಗಿ ತೊಡಗಿಸಿಕೊಳ್ಳುವ ಮೂಲಕ ಈ ಸಣ್ಣ ವ್ಯಾಪಾರಿಗಳ ಮನೆ ಬಾಗಿಲಿಗೆ ಬ್ಯಾಂಕ್ ವ್ಯವಸ್ಥೆಯನ್ನು ತರಲು ಪಿಎಂ ಸ್ವನಿಧಿ ಯೋಜನೆ ಯೋಜಿಸಿದೆ.
ಲಾಕ್ ಡೌನ್ ತೆರವಿನ ಬಳಿಕ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸ್ವ ನಿಧಿ ಯೋಜನೆಯ ಮೂಲಕ ಅವರಿಗೆ ಸಹಾಯ ಹಸ್ತ ಚಾಚಿದೆ. ಇದುವರೆಗೆ ಸುಮಾರು 1 ಲಕ್ಷ ಸಾಲ ಗಳನ್ನು ಮಂಜೂರು ಮಾಡುವ ಮೂಲಕ ಈ ಯೋಜನೆ ಮಹತ್ವದ ಸಾಧನೆ ಮಾಡಿದೆ. ಯೋಜನೆಯ ಸುಮಾರು 50 ಲಕ್ಷ ಬೀದಿಬದಿ ವ್ಯಾಪಾರಿಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.